ಹಾಸನ:-ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಬೇರೆ ಗಂಡಸಿನ ಜೊತೆ ಸರಸ ಆಡಲು ಅಡ್ಡಿಯಾಗುತ್ತಿದ್ದ ತನ್ನ ಅತ್ತೆ-ಮಾವ, ಮಕ್ಕಳು, ಗಂಡನಿಗೆ ಅನ್ನದಲ್ಲಿ ವಿಷ ಹಾಕಿ ಮಹಿಳೆ ಕೊಲ್ಲಲು ಯತ್ನಿಸಿರುವ ಘಟನೆ ಜರುಗಿದೆ. ಪತಿ ದೂರು ಆಧರಿಸಿ ಖತರ್ನಾಕ್ ಲೇಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 33 ವರ್ಷದ ಚೈತ್ರಾ ಬಂಧಿತ ಮಹಿಳೆ ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಗಜೇಂದ್ರ ಎಂಬವರೊಂದಿಗೆ ಚೈತ್ರಾ ಮದುವೆ ಆಗಿತ್ತು. ಈ ಸುಂದರ ಕುಟುಂಬಕ್ಕೆ ಇಬ್ಬರು ಮುದ್ದಾದ ಕೆಲ
ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಆದ್ರೆ ಕಳೆದ ಮೂರು ವರ್ಷಗಳಿಂದ ಸಣ್ಣ-ಪುಟ್ಟ ವಿಚಾರಕ್ಕೂ ಚೈತ್ರಾ ಗಂಡನೊಂದಿಗೆ ಜಗಳವಾಡುತ್ತಿದ್ದಳು. ಈ ನಡುವೆಯೇ ಚೈತ್ರಾಳಿಗೆ ಪುನೀತ್ ಎಂಬಾತ ಪರಿಚಯವಾಗಿದ್ದ. ಇಬ್ಬರಿಗೂ ಸಲುಗೆ ಬೆಳೆದಿತ್ತು. ಹೀಗಾಗಿ ಪುನೀತ್ ಜೊತೆಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು.
ಚೈತ್ರ-ಪುನೀತ್ ನಡುವಿನ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ ಗಜೇಂದ್ರ ಈ ವಿಚಾರವನ್ನ ಚೈತ್ರಾಳ ತಂದೆ-ತಾಯಿಗೆ ತಿಳಿಸಿದ್ದ. ಕೊನೆಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಬಳಿಕ ದಂಪತಿ ಅನ್ಯೋನ್ಯವಾಗಿದ್ದರು. ಪುನಃ ಕೆಲ ದಿನಗಳಿಂದ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮುನ್ನ ಹಾಗೂ ತನ್ನ ಅಕ್ರಮ ಸಂಬಂಧಕ್ಕೆ ಗಂಡ, ಮಕ್ಕಳು, ಅತ್ತೆ-ಮಾವ ಅಡ್ಡಿಯಾಗುತ್ತಾರೆ ಎಂಬ ಅನುಮಾನದಿಂದ ಎಲ್ಲರನ್ನೂ ಸಾಮೂಹಿಕವಾಗಿ ಮುಗಿಸುವ ಸ್ಕೆಚ್ ಹಾಕಿದಳು.
ಪತಿ ಹಾಗೂ ಅವರ ಕುಟುಂಬದವರಿಗೆ ತಿಳಿಯದಂತೆ ಊಟ-ತಿಂಡಿಯಲ್ಲಿ ವಿಷಯುಕ್ತ ಮಾತ್ರೆಗಳನ್ನು ಹಾಕುತ್ತಿದ್ದಳು. ಇದಕ್ಕೆ ಪ್ರಿಯತಮ ಶಿವು ಕೂಡ ಸಹಕಾರ ನೀಡಿದ್ದ. ಈ ವಿಷಯ ತಿಳಿದು ಪತಿ ಗಜೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ಇದೀಗ ಚೈತ್ರಾಳನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.