ಮಂಡ್ಯ: ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮೈಶುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು,
ಮೈಶುಗರ್ ಶಿಕ್ಷಣ ಸಂಸ್ಥೆ ಉಳಿಸಲು ನಾನು ಬದ್ಧನಾಗಿದ್ದೇನೆ. ಅದಕ್ಕೆ ಬೇಕಾದ ನೀಲನಕ್ಷೆ ಸಿದ್ಧಪಡಿಸಿಕೊಡಿ. ಮಾದರಿ ಶಾಲೆ ಮಾಡಲು ಅಗತ್ಯ ನೆರವು ನೀಡುತ್ತೇನೆ. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ.
ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!
ಪಂಚ ಯೋಜನೆಗಳನ್ನು ಜಾರಿಗೆ ತರಬೇಕು ಅಂತ ನನ್ನ ಕನಸಿತ್ತು. ಇಂತಹ ದೊಡ್ಡ ಕಾರ್ಯಕ್ರಮ ಕೊಡುತ್ತಾನೆಯೇ? ಎಂದು ಜನರು ಅನುಮಾನ ವ್ಯಕ್ತಪಡಿಸಿದರು. ನನ್ನ ದುರಾದೃಷ್ಟ ಜನರಿಗೆ ನನ್ನ ಮೇಲೆ ವಿಶ್ವಾಸ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹಿಂದೆ ಶಿಕ್ಷಣ ಅನ್ನೋದು ಮಠಗಳಿಂದ ನಡೆಯುತ್ತಿತ್ತು. ಸರ್ಕಾರದಿಂದ ಶಿಕ್ಷಣಕ್ಕೆ ದೊಡ್ಡ ಮಟ್ಟದ ಅವಕಾಶ ಇರಲಿಲ್ಲ. ಕೆ.ವಿ.ಶಂಕರಗೌಡ ಸೇರಿದಂತೆ ಅನೇಕ ಹಿರಿಯರು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ ಏಳು ಬೀಳು ಕಂಡಿದೆ. ಸರ್ಕಾರದಿಂದ ಸಾಕಷ್ಟು ಅನುದಾನ ಬಂದಿದೆ. ಅದು ಸರಿಯಾಗಿ ಸದ್ಭಳಕೆ ಆಗಿದೆಯೋ, ದುರುಪಯೋಗ ಆಗಿದೆಯೋ ಅದನ್ನ ಚರ್ಚೆ ಮಾಡಲ್ಲ. ನನ್ನಿಂದ ಜಿಲ್ಲೆಗೆ ಅನುಕೂಲ ಆಗುತ್ತೆ ಅಂತ ಕಳೆದ ಚುನಾವಣೆಯಲ್ಲಿ ಗೆಲ್ಲಿಸಿದ್ದಿರಿ ಎಂದು ಹೇಳಿದರು.