ಗದಗ: ಎಕ್ಸಲ್ ಕಟ್ ಆಗಿ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಘಟನೆ ನಡೆದಿದೆ.
ಬಸ್ ವಡ್ಡಟ್ಟ ಗ್ರಾಮದಿಂದ ಮುಂಡರಗಿ ಪಟ್ಟಕ್ಕೆ ಹೊರಟಿತ್ತು. ಸಿರೊಳ ಗ್ರಾಮದ ಬಳಿ ಏಕಾಏಕಿ ಎಕ್ಸಲ್ ಕಟ್ ಆಗಿದೆ. ಕೂಡಲೇ ಬಸ್ನ ವೇಗ ಕಡಿಮೆ ಮಾಡಿದ್ದಾನೆ. ನಂತರ ಬಸ್ ಚಾಲಕನ ನಿಯಂತ್ರಣ ತಪ್ಪಿ ತಗ್ಗಿಗೆ ಬಿದ್ದಿದೆ. ಇದರಿಂದ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳವಾಗಿವೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.