ತುಮಕೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಜೀವ ಕಳೆದುಕೊಂಡಿದ್ದ ಮೃತ ಯುವಕ ಮನೋಜ್ ಅವರ ಅಜ್ಜಿ ನಿಧನ ಹೊಂದಿದ್ದಾರೆ. ಮನೋಜ್ ಅಜ್ಜಿ ದೇವೀರಮ್ಮ (70) ಮೃತಪಟ್ಟ ವೃದ್ಧೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಮಂದಿ ಆರ್ಸಿಬಿ ಅಭಿಮಾನಿಗಳ ಪೈಕಿ ತುಮಕೂರಿನ ಮನೋಜ್ ಕೂಡ ಒಬ್ಬ.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರದ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ಮನೋಜ್ ಯಲಹಂಕದಲ್ಲಿ ತಂದೆ, ತಾಯಿ ಹಾಗೂ ತಂಗಿ ಜೊತೆ ವಾಸವಿದ್ದ. ಆರ್ಸಿಬಿ ವಿಜಯೋತ್ಸವ ದಿನ ಸ್ನೇಹಿತರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದ ಮನೋಜ್ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದ.
ಇದೀಗ ಮೊಮ್ಮಗನ ಅಗಲಿಕೆ ನೋವಲ್ಲೇ ಅಜ್ಜಿ ಕೂಡ ನಿಧನರಾಗಿದ್ದಾರೆ. ಇನ್ನು ಮೃತ ಮನೋಜ್ ಕುಟುಂಬಕ್ಕೆ ಡಿಸಿ ಶುಭಕಲ್ಯಾಣ್ ಭಾನುವಾರ 25 ಲಕ್ಷ ಪರಿಹಾರದ ಚೆಕ್ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ತಂದೆ ದೇವರಾಜ್,
ಚೆಕ್ ಕೊಟ್ಟಿದ್ದಾರೆ. ಚೆಕ್ ಕೊಟ್ಟರೆ ಮಗಾ ಬರ್ತಾನಾ? ಇದ್ದೋನು ಒಬ್ಬನೇ ಮಗ. 25 ಲಕ್ಷ ಚೆಕ್ ಕೊಟ್ಟಿದ್ದಾರೆ. ಈ ಹಣ ನನ್ನ ಉಪಯೋಗಕ್ಕೆ ನಾನೇನು ಮಾಡಿಕೊಳ್ಳಲ್ಲ. ನನ್ನ ಮಗಳು, ಅವರ ಅಮ್ಮನ ಅಕೌಂಟ್ಗೆ ಹಾಕುತ್ತೇನೆ. ಅವರ ಜೀವನಾಂಶಕ್ಕೆ ಹಣ ಇಡುತ್ತೇನೆ ಎಂದರು.