ಬೆಂಗಳೂರು: ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ (ಜೂ.03) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಪ್ರಕರಣ ಸಂಬಂಧಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ. ಕಾಲ್ತುಳಿತ ಸುತ್ತ ಎದ್ದಿರುವ ಗೊಂದಲ, ಆರೋಪಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿದ್ದಾರೆ. ಈಗಾಗಲೇ ಆರ್ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ತೀವ್ರ ಮುಜುಗರಕ್ಕೀಡಾಗಿದೆ. ರಾಜ್ಯ ಸರ್ಕಾರ ತರಾತುರಿಯಲ್ಲಿ ವಿಜಯೋತ್ಸವಕ್ಕೆ ಅನುಮತಿ ನೀಡಿರುವ ಬಗ್ಗೆ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿವೆ.
ಇತ್ತ ವಿಧಾನಸೌಧದಲ್ಲಿ ಆರ್ಸಿಬಿ ತಂಡದ ಸನ್ಮಾನದ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಭದ್ರತಾ ವ್ಯವಸ್ಥೆ ಮಾಡದೇ ಆತುರ ಆತುರವಾಗಿ ವಿಜಯೋತ್ಸವ ನಡೆಸಲು ಅನುವು ಮಾಡಿಕೊಟ್ಟ ಸರ್ಕಾರದ ನಡೆಗೂ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಇದರಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರ ಎದುರಿಸುತ್ತಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಿ ವಿವರಣೆ ನೀಡಲಿದ್ದಾರೆ.