Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    By AIN AuthorJune 9, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು, ಜೂ.09: ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ..

    ಬೆಂಗಳೂರಿನ ಮಹಾತ್ಮ ಗಾಂಧಿ ಕೃಷಿ ವಿಶ್ವವಿದ್ಯಾಲಯದಿಂದ ಬೇರ್ಪಟ್ಟಿರುವ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಆಡಳಿತ ಚಟುವಟಿಕೆಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡದರು..

    ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇರುವ ಜಿ.ಕೆ.ವಿ.ಕೆ ಮತ್ತು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಬೇರ್ಪಡಿಸಲಾಗಿರುವ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಕಾಲೇಜುಗಳು/ಸಂಶೋಧನಾ ಕೇಂದ್ರಗಳ ಕಟ್ಟಡ ಹಾಗೂ ಬೋಧಕ/ಬೋದಕೇತರ ಸಿಬ್ಬಂದಿಯೊಂದಿಗೆ ಮಂಡ್ಯ ಕೃಷಿ ವಿ.ವಿ.ಗೆ ನಿಯಮಾನುಸಾರ ವರ್ಗಾಯಿಸುವಂತೆ ಸಚಿವರು ತಿಳಿಸಿದರು..

    ಮಂಡ್ಯ ಕೃಷಿ ವಿ.ವಿ, ಕನಸಿನ ಕೂಸಾಗಿದ್ದು ಇದ್ದನ್ನು ಸಹ ಇತರ ಕೃಷಿ ವಿಶ್ವವಿದ್ಯಾಲಯಗಳಷ್ಟೆ ಮೌಲ್ಯಯುತವಾಗಿ, ಆಡಳಿತಾತ್ಮಕವಾಗಿ, ಶೈಕ್ಷಣಿಕವಾಗಿ ಬಾಲವರ್ಧನೆಗೊಳಿಸಲು ಎರಡು ವಿಶ್ವವಿದ್ಯಾಲಯದ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಕರೆ ನೀಡಿದರು..

    ಜಿ.ಕೆ.ವಿ.ಕೆ ಅತ್ಯಂತ ಹಳೆಯ ಕೃಷಿ ವಿಶ್ವವಿದ್ಯಾಲಯವಾಗಿದ್ದು ವ್ಯವಸ್ಥಿತವಾಗಿ ಪ್ರಗತಿ ಕಂಡಿದೆ. ಅಲ್ಲದೇ ರಾಷ್ಟ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿದೆ. ಅದರ ಮೌಲ್ಯ, ಬೆಳವಣಿಗೆ ಹಾಗೂ ಮಹತ್ವಕ್ಕೆ ಒಂದಿಷ್ಟು ದಕ್ಕೆಯಾಗದಂತೆ ಆಡಳಿತಾತ್ಮಕ ವಿಭಜನೆ ಕೈಗೊಳ್ಳುವಂತೆ ಅವರು ಸೂಚಿಸಿದರು..

    ಹೊಸದಾಗಿ ಸೃಜನೆಯಾಗಬೇಕಾಗಿರುವ ಹುದ್ದೆಗಳನ್ನ ಪಟ್ಟಿ ಮಾಡಿ ಹಣಕಾಸು ಇಲಾಖೆಗೆ ಅನುಮೋದನೆಗೆ ಕಳುಹಿಸಿಕೊಡುವಂತೆ ಸೂಚಿಸಿದ ಸಚಿವ ಎನ್.ಚಲುವರಾಯಸ್ವಾಮಿಯವರು, ಒಟ್ಟಾರೆ ರಾಜ್ಯದ ಕೃಷಿ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಣೆಗೆ ಮೊದಲ ಆದ್ಯತೆ ನೀಡುವಂತೆ ಹೇಳಿದರು..

    ಮಂಡ್ಯ ಕೃಷಿ ವಿ.ವಿ ಸದೃಡ ಆಗುವವರೆಗೆ, ವಿದ್ಯಾರ್ಥಿಗಳ ನೋಂದಣಿ ಪರೀಕ್ಷೆ ಸಿದ್ದತೆ, ಫಲಿತಾಂಶ ಮತ್ತಿತರ ವಿಚಾರಗಳ ಬಗ್ಗೆ ನಿರಂತರವಾಗಿ ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ನೀಡುವಂತೆ ಜಿ.ಕೆ.ವಿ.ಕೆ ಅಧಿಕಾರಿಗಳಿಗೆ ಸೂಚಿಸಿದ್ದರು..

    ಜಿ.ಕೆ.ವಿ.ಕೆ ಉಪ ಕುಲಪತಿ ಡಾ. ಸುರೇಶ್ ,ಶಿವಮೊಗ್ಗ ಕೃಷಿ ವಿ.ವಿ. ಉಪ ಕುಲಪತಿ ಡಾ ಜಗದೀಶ್ ,ಕೃಷಿ ಆಯುಕ್ತರಾದ ವೈ.ಎಸ್. ಪಾಟೀಲ್, ಕೃಷಿ ನಿರ್ದೇಶಕರಾದ ಡಾ. ಜಿ.ಟಿ. ಪುತ್ರ. ಅಪರ ಕೃಷಿ ನಿರ್ದೇಶಕರಾದ ವೆಂಕಟರಮಣರೆಡ್ಡಿ, ಮಂಡ್ಯ ಕೃಷಿ ವಿ.ವಿ. ವಿಶೇಷಾಧಿಕಾರಿ ಡಾ. ಹರಿಣಿಕುಮಾರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    E- Khata: ಆಸ್ತಿದಾರರಿಗೆ ಮಹತ್ವದ ಮಾಹಿತಿ- ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜು.1 ರಿಂದ ಇ-ಖಾತಾ ಕಡ್ಡಾಯ: ಮಹೇಶ್ವರ್ ರಾವ್!

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ಸೆಪ್ಟಂಬರ್ ವೇಳೆಗೆ ತಿರುಪತಿಯಲ್ಲಿ ಯಾತ್ರಿಗಳಿಗೆ ಗೆಸ್ಟ್ ಹೌಸ್ ರೆಡಿ..ಆ.15ರ ಬಳಿಕ ಮುಜರಾಯಿ ಇಲಾಖೆಯಲ್ಲಿ ಪ್ಲಾಸ್ಟಿಕ್ ನಿಷೇಧ: ರಾಮಲಿಂಗ ರೆಡ್ಡಿ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಸಚಿವ ಹೆಚ್.ಕೆ.ಪಾಟೀಲ್

    June 9, 2025

    ಅವಳಿಗೆ 36, ಇವನಿಗೆ 25.. OYO ರೂಂಗೆ ಕರೆದೊಯ್ದು ಹತ್ಯೆ ಮಾಡಿದ್ಯಾಕೆ..? ಇಲ್ಲಿದೆ ನೋಡಿ ಅಸಲಿ ಕಾರಣ..

    June 9, 2025

    ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

    June 9, 2025

    ನಟ ಕಮಲ್ ಹಾಸನ್ ವಿರುದ್ಧ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ

    June 9, 2025

    IPL ಕಾಲ್ತುಳಿತ ವಿಚಾರ; ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

    June 9, 2025

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.