Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಾಲ್ಮೀಕಿ ನಿಗಮ ಹಗರಣ: ಬಳ್ಳಾರಿ ‘ಕೈ’ ನಾಯಕರಿಗೆ ಇಡಿ ಶಾಕ್- ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!

    By AIN AuthorJune 11, 2025
    Share
    Facebook Twitter LinkedIn Pinterest Email
    Demo

    ಬಳ್ಳಾರಿ:- ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

    ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ಇ. ತುಕಾರಾಂ ಅವರ ಬಳ್ಳಾರಿ ಜಿಲ್ಲೆ ಸಂಡೂರಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತ ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್​ ಮನೆ ಮೇಲು ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.

    ಇತ್ತ ಕೂಡ್ಲಿಗಿ ಶಾಸಕ ಡಾ.ಎನ್.ಟಿ ಶ್ರೀನಿವಾಸ್ ಮನೆಯಲ್ಲೂ ED ಸರ್ಚಿಂಗ್ ನಡೆದಿದೆ. ಕೂಡ್ಲಿಗಿ ತಾಲೂಕಿನ ನರಸಿಂಹಗಿರಿಯಲ್ಲಿರೋ ನಿವಾಸದ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

    ಎಸ್, ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಹಂಚಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಇದೀಗ ಈ ಹಣಕಾಸು ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲೆಯ ಪ್ರಮುಖ ರಾಜಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿಯೂ ಇಡಿ ದಾಳಿ ನಡೆದಿದೆ. ಶಾಸಕ ಬಿ ನಾಗೇಂದ್ರಗೆ ಸೇರಿದ ಎಲ್ ಹೆಚ್ ನ 360 ರೂಂ ನಂಬರ್ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ಮಾಡಿದ್ದಾರೆ. ಬೆಳ್ಳಂ ಬೆಳಗ್ಗೆಯೇ ದಾಳಿ ನಡೆಸಿದ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

    ಇಡಿ ದಾಳಿಗೆ ಒಳಗಾದ ಪ್ರಮುಖ ನಾಯಕರು:

    ಬಳ್ಳಾರಿ ಲೋಕಸಭಾ ಸಂಸದ – ತುಕಾರಾಂ (ಸಂಡೂರು)
    ಬಳ್ಳಾರಿ ನಗರ ಶಾಸಕ – ಭರತ್ ರೆಡ್ಡಿ
    ಕೂಡ್ಲಿಗಿ – ಶಾಸಕ ಡಾ. ಶ್ರೀನಿವಾಸ
    ಕಂಪ್ಲಿ ಶಾಸಕ – ಗಣೇಶ
    ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಮಾಜಿ ಸಚಿವ – ನಾಗೇಂದ್ರ

    ಇಡಿ ಅಧಿಕಾರಿಗಳು ಎಂಟು ತಂಡಗಳಲ್ಲಿ ವಿಭಜನೆಯಾಗಿ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲಿಸಲಾಗಿದೆ.

    ಇಡಿ ದಾಳಿ ಸ್ಥಳಗಳ ವಿವರ:

    ಕಂಪ್ಲಿ ಮತ್ತು ಕುರುಗೋಡು ಶಾಸಕರಾದ ಗಣೇಶರ ನಿವಾಸದಲ್ಲಿ ಶೋಧ

    ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ ಅವರ ಮನೆ ಹಾಗೂ ಕಚೇರಿ ಪರಿಶೀಲನೆ

    ಬಳ್ಳಾರಿ ನಗರದ ಶಾಸಕರುಗಳಾದ ಭರತ್ ರೆಡ್ಡಿ ಮತ್ತು ನಾಗೇಂದ್ರ ಅವರ ಮನೆ ಮತ್ತು ಕಚೇರಿ ಪರಿಶೀಲನೆ

    ಸಂಡೂರಿನ ಸಂಸದ ತುಕಾರಾಂ ಅವರ ನಿವಾಸದಲ್ಲಿಯೂ ಶೋಧ ಕಾರ್ಯಾಚರಣೆ.

    ಇಡಿ ಅಧಿಕಾರಿಗಳು ಮೊದಲು ಸ್ಥಳೀಯ ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಹಕಾರದೊಂದಿಗೆ ದಾಳಿ ಆರಂಭಿಸಿದ್ದು, ಹಣಕಾಸು ದಾಖಲೆಗಳು, ಬ್ಯಾಂಕ್‌ ವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಮುಂಗಡವಾಗಿದ್ದ ಅನುದಾನಗಳ ದುರ್ಬಳಕೆ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಆರೋಪಗಳು ಕೇಳಿಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ತನಿಖಾ ಸಂಸ್ಥೆ ಈ ಕ್ರಮಕೈಗೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ

    June 13, 2025

    ರಬಕವಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು 4 ಎಕರೆ ಜಾಗ ಮೀಸಲು: ಶಾಸಕ ಸಿದ್ದು ಸವದಿ

    June 13, 2025

    KRS Dam: ಮಂಡ್ಯದ KRS ಜಲಾಶಯದ ಭದ್ರತೆಗೆ ಎದುರಾಯ್ತು ಭದ್ರತೆ ಸವಾಲು!

    June 13, 2025

    ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಾಂತ್ವನ ಹೇಳಿದೆ: ತೇರದಾಳ ಶಾಸಕ ಸಿದ್ದು ಸವದಿ

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    ವಾರ್ತಾ ಇಲಾಖೆ ವಾಹನದಲ್ಲಿ ಸಂಚರಿಸಿದ ಸಚಿವ ಸಂತೋಷ ಲಾಡ್

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.