ಗುಜರಾತ್:- ಏರ್ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Narendra Modi: ಇಂದು ವಿಮಾನ ದುರಂತ ಸ್ಥಳಕ್ಕೆ ಭೇಟಿ ಕೊಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!
ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪತನಗೊಂಡ ಏರ್ ಇಂಡಿಯಾ ವಿಮಾನವು ಸುಮಾರು 1.25 ಲಕ್ಷ ಲೀಟರ್ ಇಂಧನವನ್ನು ಹೊತ್ತೊಕೊಂಡು ಸಾಗುತ್ತಿತ್ತು. ಮಧ್ಯಾಹ್ನ ಹೆಚ್ಚಿನ ತಾಪಮಾನದಿಂದಾಗಿ ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ ಎಂದರು.
ಘಟನೆಯಿಂದ ಇಡೀ ರಾಷ್ಟ್ರವು ದುಃಖದಲ್ಲಿದ್ದು ಮೃತರ ಕುಟುಂಬಗಳೊಂದಿಗೆ ನಿಂತಿದೆ. ಅಪಘಾತದ ನಡೆದ 10 ನಿಮಿಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಿಕ್ಕಿತು ಎಂದು ತಿಳಿಸಿದರು.
ನಾನು ಗುಜರಾತ್ ಮುಖ್ಯಮಂತ್ರಿ ಮತ್ತು ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸ್ವಲ್ಪ ಸಮಯದಲ್ಲೇ ಕರೆ ಮಾಡಿದ್ದಾರೆ. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಒಬ್ಬರು ದುರಂತದಿಂದ ಪಾರಾಗಿದ್ದು, ಡಿಎನ್ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಹೇಳಿದರು.