ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು AI-171 ವಿಮಾನ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.ನಂತರ ದುರಂತದ ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಮೊದಲು ಸ್ಥಳಕ್ಕೆ ತಲುಪಿತು.
ಪ್ರಧಾನಿ ಮೋದಿ ಪರಿಸ್ಥಿತಿಯನ್ನು ಅವಲೋಕಿಸಿದರು. ಘಟನಾ ಸ್ಥಳವನ್ನು ತಲುಪಿದ ನಂತರ, ಪ್ರಧಾನಿ ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಸ್ಥಳವನ್ನು ಪರಿಶೀಲಿಸಿದ ನಂತರ, ಪ್ರಧಾನಿ ಮೋದಿ ಗಾಯಾಳುಗಳನ್ನು ಭೇಟಿ ಮಾಡಲು ಆಸ್ಪತ್ರೆಗೆ ತೆರಳಿದರು.
ಅಹಮದಾಬಾದ್ನಲ್ಲಿ ಅಪಘಾತ ಸ್ಥಳಕ್ಕೆ ಇಂದು ಭೇಟಿ ನೀಡಿದ್ದೇನೆ. ವಿನಾಶದ ದೃಶ್ಯವು ಹೃದಯವಿದ್ರಾವಕವಾಗಿದೆ. ದಣಿವರಿಯದೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿ ಮಾಡಿದೆ. ಈ ಊಹಿಸಲಾಗದ ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಾವಿದ್ದೇವೆ ಎಂದು ಮೋದಿ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಪತನ ದುರಂತದಿಂದ ನಾವೆಲ್ಲರೂ ದಿಗ್ಭ್ರಮೆಗೊಂಡಿದ್ದೇವೆ. ಹಠಾತ್ ಆಘಾತ ಮತ್ತು ಹಲವಾರು ಜೀವಗಳನ್ನು ಕಳೆದುಕೊಂಡಿರುವ ದುಃಖವನ್ನು ತಡೆಯಲಾಗುತ್ತಿಲ್ಲ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು. ಅವರ ನೋವಿನ ಜತೆಗೆ ನಾವಿದ್ದೇವೆ. ಅವರ ಕುಟುಂಬಗಳಲ್ಲಿ ಸೃಷ್ಟಿಯಾಗಿರುವ ನಿರ್ವಾತದ ನೋವು ವರ್ಷಗಳ ವರೆಗೆ ಇರಲಿದೆ ಎಂಬುದು ನಮಗೆ ತಿಳಿದಿದೆ. ಅವರ ಜತೆಗೆ ನಾವಿದ್ದೇವೆ. ಓಂ ಶಾಂತಿ ಎಂದು ಮತ್ತೊಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.