ಕೇರಳ: ಅಹ್ಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್-787 ಡ್ರೀಮ್ಲೈನರ್ ವಿಮಾನ ಘೋರ ದುರಂತಕ್ಕೆ ಒಳಗಾಗಿದೆ. ಮಧ್ಯಾಹ್ನ 1.38ಕ್ಕೆ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮಘಾನಿನಗರ ಪ್ರದೇಶದ ಬಿಜೆ ಎಂಬಿಬಿಎಸ್ ಹಾಸ್ಟೆಲ್ ಮೇಲೆ ಬಂದು ಅಪ್ಪಳಿಸಿತು. ಪರಿಣಾಮ ವಿಮಾನದಲ್ಲಿದ್ದ 241 ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿದ್ದ 24 ಭಾವಿ ವೈದ್ಯರು ಜೀವಬಿಟ್ಟಿದ್ದಾರೆ. ಇನ್ನು, ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಜಿಗಿದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.
ಇನ್ನೂ ಈ ದುರಂತದಲ್ಲಿ ಕೇರಳದ ಪುಲ್ಲಾಡ್ ಮೂಲದ ರಂಜಿತಾ ಗೋಪಕುಮಾರ್ ಸಾವನ್ನಪ್ಪಿದ್ದಾರೆ. ರಂಜಿತಾ ಅವರು ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ ಸ್ವಂತ ಮನೆ ಹೊಂದುವ ಕನಸನ್ನು ನನಸಾಗಿಸಿಕೊಳ್ಳಲು, ವಿದೇಶದಲ್ಲಿ ಕೆಲಸ ಮಾಡುವ ಸಲುವಾಗಿ ಇಲ್ಲಿ ರಜೆ ತೆಗೆದುಕೊಂಡು ಲಂಡನ್ಗೆ ಹೊರಟಿದ್ದರು.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಈ ಹಿಂದೆ ಓಮನ್ನ ಸಲಾಲ್ನಲ್ಲಿ ಕೆಲಸ ಮಾಡಿದ್ದ ರಂಜಿತಾ, ಇದೀಗ ಲಂಡನ್ನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಲಂಡನ್ಗೆ ಹೋದ ಬಳಿಕ ಮತ್ತೆ ಮನೆಗೆ ಓಣಂ ಹಬ್ಬಕ್ಕೇ ಬರುವುದೆಂದು ಅವರು ಪ್ಲಾನ್ ಕೂಡ ಮಾಡಿಕೊಂಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು.
ತಮ್ಮೆಲ್ಲ ಕೆಲಸ-ಕಾರ್ಯಗಳನ್ನು ಮುಗಿಸಿಕೊಂಡ ರಂಜಿತಾ ಕೊಚ್ಚಿಯಿಂದ ಗುಜರಾತ್ನ ಅಹಮದಾಬಾದ್ಗೆ ತೆರಳಿದ್ದರು. ಬಳಿಕ ಅಹಮದಾಬಾದ್ನಿಂದ ಲಂಡನ್ಗೆ ತೆರಳಲು ಏರ್ ಇಂಡಿಯಾ ವಿಮಾನವೇರಿದ್ದರು. ಆದರೆ ತನ್ನ ಕುಟುಂಬಕ್ಕಾಗಿ ಪಟ್ಟ ಕಷ್ಟ, ಹೊತ್ತ ಕನಸುಗಳು ವಿಮಾನ ಟೇಕ್ಆಪ್ ಆದ ಕೆಲವೇ ನಿಮಿಷಗಳಲ್ಲಿ ನುಚ್ಚುನೂರಾಗಿದೆ.
ರಂಜಿತಾ ಅವರಿಗೆ ತಾಯಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅವರ ಹೊಸ ಮನೆಯ ನಿರ್ಮಾಣ ಕಾರ್ಯ ಮುಕ್ಕಾಲು ಭಾಗದಷ್ಟು ಪೂರ್ಣಗೊಂಡಿದೆ. ಅಲ್ಲಿನ ಸ್ಥಳೀಯ ನಿವಾಸಿ ಮತ್ತು ಸಾರ್ವಜನಿಕ ಕಾರ್ಯಕರ್ತ ಅನೀಶ್ ಅವರು ಪ್ರತಿಕ್ರಿಯಿಸಿದ್ದಾರೆ. “ರಂಜಿತಾ ಅವರು ವಿದೇಶಕ್ಕೆ ತೆರಳಲು ನಿರ್ಧರಿಸಿದ್ದರು. ಅವರಿಗೆ 10ನೇ ತರಗತಿಯಲ್ಲಿ ಮತ್ತು 7ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಮಕ್ಕಳಿದ್ದಾರೆ. ನಿನ್ನೆ ಅವರ ಸಂಬಂಧಿಕರು ಮಕ್ಕಳನ್ನು ಶಾಲೆಗೆ ಬಿಟ್ಟು ಬಂದಿದ್ದರು” ಎಂದು ತಿಳಿಸಿದ್ದಾರೆ.