Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೊಸ ಮನೆಗೆ ಕಾಲಿಡುವ ತವಕದಲ್ಲಿದ್ದ ಕನಸು ನುಚ್ಚುನೂರು: ವಿಮಾನ ಪತನದಲ್ಲಿ ನರ್ಸ್ ರಂಜಿತಾ ದುರಂತ ಅಂತ್ಯ

    By Author AINJune 13, 2025
    Share
    Facebook Twitter LinkedIn Pinterest Email
    Demo

    ಕೇರಳ: ಅಹ್ಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್-787 ಡ್ರೀಮ್ಲೈನರ್ ವಿಮಾನ ಘೋರ ದುರಂತಕ್ಕೆ ಒಳಗಾಗಿದೆ. ಮಧ್ಯಾಹ್ನ 1.38ಕ್ಕೆ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮಘಾನಿನಗರ ಪ್ರದೇಶದ ಬಿಜೆ ಎಂಬಿಬಿಎಸ್ ಹಾಸ್ಟೆಲ್ ಮೇಲೆ ಬಂದು ಅಪ್ಪಳಿಸಿತು. ಪರಿಣಾಮ ವಿಮಾನದಲ್ಲಿದ್ದ 241 ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿದ್ದ 24 ಭಾವಿ ವೈದ್ಯರು ಜೀವಬಿಟ್ಟಿದ್ದಾರೆ. ಇನ್ನು, ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಜಿಗಿದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.

    ಇನ್ನೂ ಈ ದುರಂತದಲ್ಲಿ ಕೇರಳದ ಪುಲ್ಲಾಡ್​ ಮೂಲದ ರಂಜಿತಾ ಗೋಪಕುಮಾರ್​ ಸಾವನ್ನಪ್ಪಿದ್ದಾರೆ. ರಂಜಿತಾ ಅವರು ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ ಸ್ವಂತ ಮನೆ ಹೊಂದುವ ಕನಸನ್ನು ನನಸಾಗಿಸಿಕೊಳ್ಳಲು, ವಿದೇಶದಲ್ಲಿ ಕೆಲಸ ಮಾಡುವ ಸಲುವಾಗಿ ಇಲ್ಲಿ ರಜೆ ತೆಗೆದುಕೊಂಡು ಲಂಡನ್​ಗೆ ಹೊರಟಿದ್ದರು.

    ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ಈ ಹಿಂದೆ ಓಮನ್​ನ ಸಲಾಲ್​ನಲ್ಲಿ ಕೆಲಸ ಮಾಡಿದ್ದ ರಂಜಿತಾ, ಇದೀಗ ಲಂಡನ್​ನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಲಂಡನ್​ಗೆ ಹೋದ ಬಳಿಕ ಮತ್ತೆ ಮನೆಗೆ ಓಣಂ ಹಬ್ಬಕ್ಕೇ ಬರುವುದೆಂದು ಅವರು ಪ್ಲಾನ್​ ಕೂಡ ಮಾಡಿಕೊಂಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು.

    ತಮ್ಮೆಲ್ಲ ಕೆಲಸ-ಕಾರ್ಯಗಳನ್ನು ಮುಗಿಸಿಕೊಂಡ ರಂಜಿತಾ ಕೊಚ್ಚಿಯಿಂದ ಗುಜರಾತ್​ನ ಅಹಮದಾಬಾದ್​ಗೆ ತೆರಳಿದ್ದರು. ಬಳಿಕ ಅಹಮದಾಬಾದ್​ನಿಂದ ಲಂಡನ್​ಗೆ ತೆರಳಲು ಏರ್​ ಇಂಡಿಯಾ ವಿಮಾನವೇರಿದ್ದರು. ಆದರೆ ತನ್ನ ಕುಟುಂಬಕ್ಕಾಗಿ ಪಟ್ಟ ಕಷ್ಟ, ಹೊತ್ತ ಕನಸುಗಳು ವಿಮಾನ ಟೇಕ್​ಆಪ್​​ ಆದ ಕೆಲವೇ ನಿಮಿಷಗಳಲ್ಲಿ ನುಚ್ಚುನೂರಾಗಿದೆ.

    ರಂಜಿತಾ ಅವರಿಗೆ ತಾಯಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅವರ ಹೊಸ ಮನೆಯ ನಿರ್ಮಾಣ ಕಾರ್ಯ ಮುಕ್ಕಾಲು ಭಾಗದಷ್ಟು ಪೂರ್ಣಗೊಂಡಿದೆ. ಅಲ್ಲಿನ ಸ್ಥಳೀಯ ನಿವಾಸಿ ಮತ್ತು ಸಾರ್ವಜನಿಕ ಕಾರ್ಯಕರ್ತ ಅನೀಶ್​ ಅವರು ಪ್ರತಿಕ್ರಿಯಿಸಿದ್ದಾರೆ. “ರಂಜಿತಾ ಅವರು ವಿದೇಶಕ್ಕೆ ತೆರಳಲು ನಿರ್ಧರಿಸಿದ್ದರು. ಅವರಿಗೆ 10ನೇ ತರಗತಿಯಲ್ಲಿ ಮತ್ತು 7ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಮಕ್ಕಳಿದ್ದಾರೆ. ನಿನ್ನೆ ಅವರ ಸಂಬಂಧಿಕರು ಮಕ್ಕಳನ್ನು ಶಾಲೆಗೆ ಬಿಟ್ಟು ಬಂದಿದ್ದರು” ಎಂದು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Axiom-4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    Ahmedabad Plane Crash: ವಿಮಾನ ಮೇಲಕ್ಕೆ ಏರುತ್ತಿಲ್ಲ..: ಕ್ಯಾಪ್ಟನ್ ಸುಮಿತ್ ಕೊನೆ 5 ಸೆಕೆಂಡ್’ಗಳ ಆಡಿಯೋ ವೈರಲ್

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,400 ಕ್ಕೆ ಏರಿಕೆ..! 87 ಮಂದಿ ಸಾವು

    June 14, 2025

    11 ಸೀಟ್ ನಿಗೂಢತೆ: ವಿಮಾನ ದುರಂತದಲ್ಲಿ ವಿಶ್ವಾಸ್​ ಕುಮಾರ್ ರೀತಿ ಬದುಕಿ ಬಂದಿದ್ದ ನಟ..ಯಾರದು?

    June 14, 2025

    PM Modi: ನಾಳೆಯಿಂದ 3 ದಿನ ಕೆನಡಾದಲ್ಲಿ ಜಿ7 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

    June 14, 2025

    ಏರ್ ಇಂಡಿಯಾ ವಿಮಾನ ದುರಂತ: ಕಾರಣ ಪತ್ತೆ ಹಚ್ಚಲು ಉನ್ನತ ಮಟ್ಟದ ಸಮಿತಿ ರಚನೆ!

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025

    Air India Plane Crash: ಏರ್ ಇಂಡಿಯಾ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

    June 14, 2025

    ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ!

    June 14, 2025

    ನಡುರಸ್ತೆಯಲ್ಲೇ ಪಟಾಕಿ, ಪೇಪರ್ ಬ್ಲಾಸ್ಟ್ ಸಿಡಿಸಿ ಬರ್ತಡೆ ಸೆಲಬ್ರೇಷನ್: ಸುಮೋಟೋ ಕೇಸ್ ದಾಖಲಿಸಿ ತನಿಖೆ ಕೈಗೊಂಡ ಖಾಕಿ!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.