ನವದೆಹಲಿ: ಗುರುವಾರ ಮಧ್ಯಾಹ್ನ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ 61 ವಿದೇಶಿ ಪ್ರಯಾಣಿಕರಲ್ಲಿ 53 ಮಂದಿ ಬ್ರಿಟಿಷ್, ಏಳು ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದವರು ಸೇರಿದ್ದಾರೆ. ಅಪಘಾತದ ಬಗ್ಗೆ ಆಯಾ ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದಾಗ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಈ ಮಾಹಿತಿ ನೀಡಿದ್ದಾರೆ.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಜೈಶಂಕರ್ ಅವರು ಯುನೈಟೆಡ್ ಕಿಂಗ್ಡಮ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ, ಪೋರ್ಚುಗೀಸ್ ವಿದೇಶಾಂಗ ಸಚಿವೆ ಪಾಲೊ ರಂಗೆಲ್ ಮತ್ತು ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರೊಂದಿಗೆ ಸಂಪರ್ಕದಲ್ಲಿದ್ದು, ವಿಮಾನ ಅಪಘಾತ ಮತ್ತು ನಂತರದ ಕ್ರಮಗಳ ಕುರಿತು ಅವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿರುವುದಾಗಿ ಹೇಳಿದರು. ಇದನ್ನು ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಅಪಘಾತದಲ್ಲಿ ಆ ದೇಶಗಳ ನಾಗರಿಕರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುವುದಾಗಿ ಜೈಶಂಕರ್ ಹೇಳಿದರು ಮತ್ತು ಈ ಕಠಿಣ ಸಂದರ್ಭಗಳಲ್ಲಿ ಅವರ ನಾಗರಿಕರ ಶವಗಳನ್ನು ಸ್ವದೇಶಕ್ಕೆ ತರುವಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು.