ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಕೇಂದ್ರದ ಮೇಲೆ ಆರೋಪ ಮಾಡ್ತಿದೆ ಎಂದು ಸಿಎಂ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ಸಿಎಂ ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದ್ದಾರೆ.
ಸಿಎಂ ಅವರನ್ನ ನೋಡಿದ್ರೆ ಪಾಪ ಅನಿಸುತ್ತೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಕೇಂದ್ರದ ಮೇಲೆ ಆರೋಪ ಮಾಡ್ತಿದೆ. ಕೇಂದ್ರದ ಯೋಜನೆಗಳಿಗೂ ಕತ್ತರಿ ಹಾಕ್ತಿದೆ. ರಾಜ್ಯ ಸರ್ಕಾರದ ಆರೋಪ ಸತ್ಯವಲ್ಲ ಎಂದು ಹೇಳಿದ್ದಾರೆ. ಇನ್ನೂ ಹೊಸದಾಗಿ ಜಾತಿ ಜನಗಣತಿಗೆ ನಿರ್ಧಾರ ವಿಚಾರವಾಗಿ ಮಾತನಾಡಿದ ಅವರು,
ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ!
ಮೊದಲಿಂದಲೂ ಜಾತಿ ಜನಗಣತಿ ಅವೈಜ್ಞಾನಿಕ, ಅವಾಸ್ತವ ಅಂತ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ಯಪಡಿಸಿದರು. ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ. ಕಾಲ್ತುಳಿತ ದುರಂತ ಪ್ರಕರಣ ಡೈವರ್ಟ್ ಮಾಡಲು ಹೊಸದಾಗಿ ಸಮೀಕ್ಷೆ ಮಾಡೋ ಪ್ರಸ್ತಾಪ ಮಾಡಿದ್ದಾರೆ. ಅಂತಿಮವಾಗಿ ಈ ವಿಚಾರದಲ್ಲಿ ಇವ್ರು ಏನೂ ಮಾಡಲು ಆಗೋದಿಲ್ಲ ಎಂದು ಹೇಳಿದ್ದಾರೆ.