ಮೈಸೂರು: ಡಿಸೆಂಬರ್’ನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಿದ್ದರಾಮಯ್ಯ ಜಾತಿಗಣತಿ ಮರುಸಮೀಕ್ಷೆ ಹೇಗೆ ಮಾಡಿಸ್ತಾರೆ? ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ವೋಟು ಪಡೆದು ಎರಡನೇ ಸಲ ಮುಖ್ಯಮಂತ್ರಿಯಾದವರು ಅಹಿಂದ ವರ್ಗದವರಿಗೆ ಸುಳ್ಳು ಹೇಳುತ್ತಿದ್ದಾರೆ,
ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ!
ಜಾತಿ ಗಣತಿ ಮರುಸರ್ವೇಯನ್ನು ಅವರು ಮೂರು ತಿಂಗಳಲ್ಲಿ ಮಾಡಿಸೋದು ಹೇಗೆ ಸಾಧ್ಯ? ಅವರು ಹೆಚ್ಚೆಂದರೆ ಡಿಸೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡಬೇಕಿರುವುದು ಈಗಾಗಲೇ ನಿರ್ಣಯಿಸಲ್ಪಟ್ಟಿದೆ, ಎಂದು ಹೇಳಿದ ಅವರು,
ದೆಹಲಿಯಲ್ಲಿ ಹೈಕಮಾಂಡ್ನವರು ಮತ್ತೊಮ್ಮೆ ಜಾತಿಗಣತಿ ಮಾಡಿಸಿ ಅಂದಾಗ ಸಿದ್ದರಾಮಯ್ಯ ಚಕಾರವೆತ್ತದೆ ಬಾಯಿಮುಚ್ಚಿಕೊಂಡು ಅಲ್ಲಿಂದ ವಾಪಸ್ಸಾದರು ಎಂದು ಮೂದಲಿಸಿದರು. ಎಲ್ಲಿ ಹೋಯಿತು ಅವರ ಧೈರ್ಯ? ಮರುಸರ್ವೇ ಮಾಡಿಸಲ್ಲ ಅಂತ ಹೇಳಿದ್ದರೆ ಅವರು ಹಿಂದುಳಿದ ವರ್ಗ ಸಮುದಾಯಗಳ ದೃಷ್ಟಿಯಲ್ಲಿ ಹೀರೋ ಆಗಿರುತ್ತಿದ್ದರು ಎಂದು ವಿಶ್ವನಾಥ್ ಹೇಳಿದರು.