ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರೊಬ್ಬರ ಮೇಲೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ನ ಚಾಲಕ 42 ವರ್ಷದ ಅತಹರ್ ಹುಸೇನ್ ಮೇಲೆ ಕಾವ್ಯ ಎಂಬ 30 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಕೈಕೊಂಡರಹಳ್ಳಿ ಬಸ್ನಿಲ್ದಾಣದಲ್ಲಿ ಟಿಕೆಟ್ ತೆಗೆದುಕೊಂಡ ಕಾವ್ಯ, ತನ್ನ ಕಚೇರಿಯ ಮುಂದೆ ಬಸ್ ನಿಲ್ಲಿಸುವಂತೆ ಚಾಲಕನಿಗೆ ಒತ್ತಾಯಿಸಿದ್ದಾಳೆ. ಆದರೆ, ಸಂಚಾರ ದಟ್ಟಣೆ ಮತ್ತು ನಿಯಮಗಳ ಕಾರಣದಿಂದ ಅತಹರ್ ಅವರು ಹೇಳಿದಂತೆ ನಿಲ್ಲಿಸಿಲ್ಲ. ನಂತರ ಆ ಮಹಿಳೆ ಹೊಟ್ಟೆನೋವಿನಿಂದ ಕಿರುಚಿಕೊಂಡು ಬಸ್ ನಿಲ್ಲಿಸುವಂತೆ ಒತ್ತಾಯಿಸಿದ್ದಾಳೆ.
ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ!
ಇದಕ್ಕೆ ಸ್ಪಂದಿಸಿದ ಚಾಲಕ, ಬಲಕ್ಕೆ ತಿರುವು ತೆಗೆದುಕೊಂಡು ಬಸ್ನಿಲ್ಲಿಸಿದ್ದಾರೆ. ಈ ವೇಳೆ ಕಾವ್ಯ ತನ್ನ ಚಪ್ಪಲಿಯನ್ನು ತೆಗೆದುಕೊಂಡು ಅತಹರ್ ಮೇಲೆ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯಿಂದ ಆಘಾತಗೊಂಡ ಚಾಲಕ, ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕಾವ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121, 131, 132 ಮತ್ತು 352ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.