ಧಾರವಾಡ:- ಧಾರವಾಡ ಅಪರ ಜಿಲ್ಲಾಧಿಕಾರಿ ಸಿಡಿ ಗೀತಾ ಅವರ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಒಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.
ನಿಮ್ಮ ದಪ್ಪಗಿರೋ ಹೊಟ್ಟೆ ಸಣ್ಣ ಆಗ್ಬೇಕಾ!? ಹಾಗಿದ್ರೆ ಮೊಸರಿಗೆ ಒಂದು ಚಮಚ ಈ ಪುಡಿ ಬೆರೆಸಿ! ಆಮೇಲೆ ನೋಡಿ ಚಮತ್ಕಾರ!
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬಸೂರು ಬಳಿ ಈ ಘಟನೆ ನಡೆದಿದೆ. ಅಪರ ಜಿಲ್ಲಾಧಿಕಾರಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದ ಪ್ರಾಣಪಾಯ ಸಂಭವಿಸಿಲ್ಲ. ಮಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ ಲಾಡ್ ಅವರ ಜೊತೆಗೆ ಅಪರ ಜಿಲ್ಲಾಧಿಕಾರಿ ಗೀತಾ ಅವರು ಮಳೆ ಹಾನಿ ಪ್ರದೇಶ ಪರಿಶೀಲಿಸುವ ಬರುವಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.