ಕಲಬುರಗಿ:- 2028ಕ್ಕೆ ದಲಿತ ಸಿಎಂ ಬಗ್ಗೆ ಗಂಭೀರ ಚರ್ಚೆ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮತ್ತೊಂದು ವಿಮಾನ ಅಪಘಾತ: ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಪತನ – 6 ಮಂದಿ ಸಾವು!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ದಲಿತ ಸಿಎಂ ಕೂಗು ನಿಂತಿದೆ. ಹೊಸ ಎಲೆಕ್ಷನ್ ಆದ ಮೇಲೆ ನೋಡೋಣ ಎಂದರು. ಇನ್ನೂ ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ ಅಂತ ಎಚ್. ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ಹೇಳಿಕೆಗೂ ನಮ್ಮಗೂ ಸಂಬಂಧ ಇಲ್ಲ ಅವರು ನಮ್ಮ ಪಕ್ಷದವರಲ್ಲ. ನಮ್ಮ ಪಕ್ಷದವರು ಹೇಳಿದ್ರೆ ಅದಕ್ಕೆ ರಿಯಾಕ್ಟ್ ಮಾಡಬಹುದು, ಅವರ ಹೇಳಿಕೆಗೂ ನಮ್ಮಗೂ ಯಾವ ಸಂಬಂಧ ಇಲ್ಲ ಎಂದಿದ್ದಾರೆ.
ಇದೇ ವೇಳೆ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಇಲ್ಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ಕಳೆದ 2 ವರ್ಷಗಳಿಂದ ಅವರು ಇದನ್ನೇ ಹೇಳ್ತಿದ್ದಾರೆ. ಇನ್ನೂ 3 ವರ್ಷ ಬಿಜೆಪಿಯವರು ಗ್ಯಾರಂಟಿಯಿಂದ ಅಭಿವೃದ್ಧಿ ಇಲ್ಲ ಅಂತಾ ಹೇಳ್ತಾರೆ. ಗ್ಯಾರಂಟಿಯಿಂದ ಯಾವ ಅಭಿವೃದ್ಧಿ ಸಹ ನಿಂತಿಲ್ಲ. ಬೊಮ್ಮಾಯಿ ಅವಧಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಅನುದಾನ ಇರಲಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲ ಇಲಾಖೆಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.