ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೋದಾಗ ಹಾವು ಕಚ್ಚಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಚೆನ್ನಪೇಟೆ ಯಲ್ಲಿ ನಡೆದಿದೆ. ಪಡಿಯಪ್ಪ ನಂದುಡಗಿ (42) ಮೃತ ದುರ್ದೈವಿಯಾಗಿದ್ದು,
ಮೂತ್ರ ವಿಸರ್ಜನೆಗೆಂದು ಹೋದಾಗ ನಾಲದಲ್ಲಿದ್ದ ಕೊಳಕ ಮಂಡಲ ಹಾವು ಕಚ್ಚಿದ್ದು, ತಕ್ಷಣ ಪಡಿಯಪ್ಪನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಆದ್ರೆ ಚಿಕಿತ್ಸೆ ಫಲಿಸದೆ ಇಂದು ಪಡಿಯಪ್ಪ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಹಾವು ಕಚ್ಚಿದ್ದು, ವೈದ್ಯರ ಸತತ ಪ್ರಯತ್ನದ ನಂತರವೂ ಮೃತ ಪಟ್ಟಿದ್ದಾರೆ. ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.