ಬೆಂಗಳೂರು: ಐಶ್ವರ್ಯಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ನ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಜಾರಿ ಮಾಡಿದೆ. ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಸುರೇಶ್ ಅವರಿಗೆ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.
ಜೂನ್ 19ರಂದು ವಿಚಾರಣೆಗೆ ಹಾಜರಾಗುವುದು ಕಷ್ಟ, ಆದ್ದರಿಂದ ಜೂನ್ 23ರಂದು ಹಾಜರಾಗುವುದಾಗಿ ಇ.ಡಿಗೆ ತಿಳಿಸಿರುವುದಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ತಾನು ಡಿ.ಕೆ.ಸುರೇಶ್ ಅವರ ಸಹೋದರಿ, ಅನೇಕ ರಾಜಕೀಯ ನಾಯಕರ ಪರಿಚಯವಿದೆ‘ ಎಂದು ನಂಬಿಸಿ ಸಾಲದ ರೂಪದಲ್ಲಿ ಚಿನ್ನ ಪಡೆದು ವಂಚಿಸಿದ ಆರೋಪ ಐಶ್ವರ್ಯಾ ಗೌಡ ವಿರುದ್ಧ ಕೇಳಿ ಬಂದಿತ್ತು.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್ ಐತಾಳ್ ಎಂಬುವವರು ನೀಡಿದ್ದ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರ ಬಿ ಅವರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.