Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: ಡಿ.ಕೆ.ಶಿವಕುಮಾರ್

    By Author AINJune 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: “ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿರುವ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಮಾಡಲು ಅರಣ್ಯ ಇಲಾಖೆ ಮುಂದಾದರೆ ಪಾಲಿಕೆಯಿಂದ ಅಗತ್ಯ ಧನಸಹಾಯ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಅರಣ್ಯ ಇಲಾಖೆಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಂಗಳವಾರ ಮಾತನಾಡಿದರು.

    “ಕಬ್ಬನ್ ಪಾರ್ಕ್, ಲಾಲ್ ಬಾಗ್ ರೀತಿ ಉದ್ಯಾನಗಳನ್ನು ಅಭಿವೃದ್ಧಿಪಡಿಸಿದರೆ ಬೆಂಗಳೂರು ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳು ಉಳಿದಂತಾಗುತ್ತದೆ. ಸಾರ್ವಜನಿಕರಿಗೂ ಅನುಕೂಲವಾಗುತ್ತದೆ” ಎಂದು ಹೇಳಿದರು. “ಭೂಮಿ ನಮಗೆ ಸೇರಿದ್ದಲ್ಲ, ನಾವು ಭೂಮಿಗೆ ಸೇರಿದವರು ಎನ್ನುವುದನ್ನು ಯಾರೊಬ್ಬರು ಮರೆಯಬಾರದು. ಪ್ರಕೃತಿ ಉಚಿತವಾಗಿ ಊಟ ಕೊಡುತ್ತಿದೆ ಎಂದು ಅದನ್ನು ಕಂಠಪೂರ್ತಿ ತಿನ್ನಬಾರದು. ಭವಿಷ್ಯಕ್ಕೂ ಉಳಿಸಬೇಕು” ಎಂದು ತಿಳಿಸಿದರು.

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    “ಸುತ್ತಲಿನ ಪ್ರಕೃತಿ, ಮಣ್ಣು, ನೀರನ್ನು ಉಳಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಹಸಿರು ಮತ್ತು ಉಸಿರನ್ನು ರಕ್ಷಿಸುವ ಗ್ಯಾರಂಟಿಯನ್ನು ನಮ್ಮ ಸರ್ಕಾರ ನೀಡಲಿದೆ. ಪ್ರಕೃತಿಯಿಂದ ನಾವು ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿಗೆ ಅದಕ್ಕೆ ವಾಪಸ್ ಕೊಡಬೇಕು. ಈ ಭೂಮಿ ಉಳಿದರೆ ಮಾತ್ರ ನಾವು ಉಳಿಯುತ್ತೇವೆ” ಎಂದರು.

    “ನಾವುಗಳು ನಮ್ಮ ಜೀವಿತಾವಧಿಯಲ್ಲಿ ಒಂದೊಂದು ಮರವನ್ನು ಬೆಳೆಸುವಂತಹ ಸಂಕಲ್ಪವನ್ನು ತೆಗೆದುಕೊಳ್ಳಬೇಕು. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ನಗರದ ಶಾಲೆಗಳ ವಿದ್ಯಾರ್ಥಿಗಳು ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ಯೋಜನೆ ರೂಪಿಸಿದೆವು. ಕಳೆದ ವರ್ಷ ಸುಮಾರು 50 ಸಾವಿರ ಸಸಿಗಳನ್ನು ನೆಡಲಾಗಿದೆ. ಇವುಗಳನ್ನು ವಿದ್ಯಾರ್ಥಿಗಳೇ ಪೋಷಿಸುತ್ತಿದ್ದಾರೆ” ಎಂದು ಹೇಳಿದರು.

    “ಪ್ರತಿ ಶಾಲೆಯಲ್ಲಿ 25 ವಿದ್ಯಾರ್ಥಿಗಳನ್ನು ಒಳಗೊಂಡ ʼಕ್ಲೈಮೆಟ್ ಆಕ್ಷನ್ ಕ್ಲಬ್ʼ ರಚನೆ ಮಾಡಬೇಕು ಎಂದು ಸೂಚನೆ ನೀಡಿದ್ದೇವೆ. ಬೆಂಗಳೂರಲ್ಲಿ 1.20 ಕೋಟಿಗೆ ವಾಹನಗಳ ಸಂಖ್ಯೆ ಏರಿಕೆಯಾಗಿದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗಿದೆ. ಇದನ್ನು ನಿಯಂತ್ರಣ ಮಾಡಲು ನಾವು ಆಲೋಚನೆ ಮಾಡಬೇಕಿದೆ” ಎಂದು ಹೇಳಿದರು. “ನನ್ನ ಹುಟ್ಟುಹಬ್ಬದ ದಿನ ಕಬಿನಿ ಹಿನ್ನೀರಿನ ಅರಣ್ಯಕ್ಕೆ ಭೇಟಿ ನೀಡಿದ್ದೆ. ಅತ್ಯಂತ ಸಂಪತ್ ಭರಿತವಾದ ಪ್ರಾಣಿ ಸಂಕುಲವನ್ನು ನಾನು ನೋಡಿದೆ. ಆಗ ವಿದೇಶದಲ್ಲಿರುವಂತೆ ನನಗೆ ಭಾಸವಾಯಿತು” ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    June 17, 2025

    ಗೋಲ್ಡ್ ವಂಚನೆ ಪ್ರಕರಣ: ಡಿ.ಕೆ ಸುರೇಶ್’ಗೆ ಇಡಿ ಸಮನ್ಸ್!

    June 17, 2025

    2028ಕ್ಕೆ ನಾವೇ.. ನಮ್ಮದೇ ಸರ್ಕಾರ: ಬಿಜೆಪಿ ಪ್ರತಿಭಟನೆಗೆ ಡಿಕೆಶಿ ತಿರುಗೇಟು

    June 17, 2025

    ಸರ್ಕಾರದ ವಿರುದ್ಧ BJP ಪ್ರತಿಭಟನೆ: ವಿಮಾನ ದುರಂತಕ್ಕೆ ನಾವು ರಾಜೀನಾಮೆ ಕೇಳಿದ್ವಾ? ಸಿಎಂ ಸಿದ್ದರಾಮಯ್ಯ ಆಕ್ರೋಶ

    June 17, 2025

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Bengaluru: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್..!

    June 17, 2025

    ದೇಶದಲ್ಲಿ ಕೊರೋನಾ ಆತಂಕ: ಯಾವ ರಾಜ್ಯದಲ್ಲಿ ಅತಿ ಹೆಚ್ಚು ಕೇಸ್.? ಬೆಂಗಳೂರಲ್ಲಿ ಎಷ್ಟು.?

    June 17, 2025

    ಮದುವೆಗೆ ಹೋಗಿದ್ದವರ ಮನೆ ಗೂಡಿಸಿ ಗುಂಡಾಂತರ ಮಾಡಿದ್ದ ಆರೋಪಿಗಳು ಅರೆಸ್ಟ್..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    DK Shivakumar Fall Down: ಸೈಕಲ್ ಏರಿ ಜಾರಿ ಬಿದ್ದ ಡಿಕೆಶಿ..! ವಿಡಿಯೋ ವೈರಲ್

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.