ಕೆ.ಆರ್. ಪೇಟೆ: ರಾಜ್ಯದ ಅನೇಕ ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ಜಿಲ್ಲೆಯ ಹೇಮಾವತಿ ನದಿ ಪಾತ್ರದಲ್ಲಿ ವರುಣನ ಆರ್ಭಟ ಜೋರಾಗಿದೆ. ಹಾಸನದ ಗೊರೂರು ಅಣೆಕಟ್ಟೆ ಭರ್ತಿಯಾಗುವ ಹಂತದಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಹಾಗೂ ಬಂಡಿಹೊಳೆ ಬಳಿಯ ಹೇಮಗಿರಿ ಅಣೆಕಟ್ಟೆಗಳಲ್ಲಿ ನದಿಯು ಉಕ್ಕಿ ಹರಿಯುತ್ತಿದೆ.
ಆಘಾತಕಾರಿ ಘಟನೆ: ವಾಕಿಂಗ್ ಗೆ ಹೋಗಿದ್ದ ವೃದ್ಧೆ ಮೇಲೆ ಅತ್ಯಾಚಾರ: ಗುಂಡು ಹಾರಿಸಿ ಆರೋಪಿ ಬಂಧಿಸಿದ ಖಾಕಿ!
ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಕ್ರಮ ತೆಗೆದುಕೊಂಡಿರುವ ತಾಲೂಕು ಆಡಳಿತವು ಪ್ರವಾಹದ ಎಚ್ಚರಿಕೆ ನೀಡಿದೆ. ಜನ ಜಾನುವಾರುಗಳನ್ನು ನದಿಗೆ ಇಳಿಸದಂತೆ ಮನವಿ ಮಾಡಿದೆ. ನದಿ ಪಾತ್ರ ಮತ್ತು ನದಿ ಪಕ್ಕದ ತಗ್ಗು ಪ್ರದೇಶದ ಜನರ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಆದೇಶ ಹೊರಡಿಸಿದೆ. ಸಾರ್ವಜನಿಕರು ನದಿಯ ಬಳಿಗೆ ಬಟ್ಟೆ ಪಾತ್ರೆ, ತೊಳೆಯಲು ಹೋಗುವುದಾಗಲಿ, ನದಿಯಲ್ಲಿ ಸ್ನಾನ ಮಾಡುವುದಾಗಲಿ, ಈಜುವುದಾಗಲಿ ಮಾಡಬಾರದು,” ಎಂದು ಆದೇಶದಲ್ಲಿ ತಾಲೂಕಾಡಳಿತ ಉಲ್ಲೇಖಿಸಿದೆ.