ಬೆಂಗಳೂರು:- ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಂಧ್ರದ ವೈಎಸ್ಆರ್ ಸಿ, ಪಿ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ.
ಭೂಸ್ವಾಧೀನ ವಿರೋಧಿಸಿ ಜೂ.25 ರೈತರ ಚಳುವಳಿ: ಪ್ರತಿಭಟನೆಗೂ ಮುನ್ನ ನೋಟಿಸ್ ಕೊಟ್ಟ ಪೊಲೀಸರು!
ಕಳೆದ ಬಾರಿ ಆಂಧ್ರಪ್ರದೇಶದ ಚಂದ್ರಗಿರಿ ಶಾಸಕರಾಗಿದ್ದ ಹೆವಿ ರೆಡ್ಡಿ ಭಾಸ್ಕರ ರೆಡ್ಡಿ, ಇದೀಗ ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದ. ಈ ವೇಳೆ ಚೆವಿರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಗನ್ ರೆಡ್ಡಿ ಆಂಧ್ರದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದಿದ್ದ ಹಗರಣದಲ್ಲಿ ಚವಿರೆಡ್ಡಿ ಕೂಡ ಆರೋಪಿಯಾಗಿದ್ದಾರೆ. ಇವರ ವಿರುದ್ಧ ಲುಕ್ಔಟ್ ನೋಟಿಸ್ ಸಹ ಜಾರಿಯಾಗಿದೆ. ಆದಾಗ್ಯೂ, ಚವಿರೆಡ್ಡಿ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ವಿದೇಶಕ್ಕೆ ತೆರಳಲು ಮುಂದಾಗಿದ್ದರು.
ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದ ವೇಳೆ ಅವರನ್ನು ಬಂಧಿಸಿರುವ ಬೆಂಗಳೂರು ಪೊಲೀಸರು, ಮಧ್ಯರಾತ್ರಿಯೇ ಆಂಧ್ರದ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆಂಧ್ರದ ಎಎಸ್ಪಿ ಮಹೇಶ್ ವಶಕ್ಕೆ ಚವಿರೆಡ್ಡಿಯನ್ನು ಒಪ್ಪಿಸಲಾಗಿದೆ. ನಂತರ ಚವಿರೆಡ್ಡಿಯನ್ನು ಆಂಧ್ರ ಪೊಲೀಸರು ಕರೆದೊಯ್ದಿದ್ದಾರೆ. ಬೆಂಗಳೂರಿನಿಂದ ಶ್ರೀಲಂಕಾದ ಕೊಲಂಬೊಗೆ ತೆರಳಲು ಮುಂದಾಗಿದ್ದ ಭಾಸ್ಕರ್ ರೆಡ್ಡಿ ಅವರನ್ನು ಮೊದಲಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದರು. ನಂತರ, ಅವರನ್ನು ಬಂಧಿಸಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.