ಬೆಂಗಳೂರು:- ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾಸಿಕ ಗೌರವ ಸಂಭಾವನೆ. ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ರಾಶಿಯವರಿಗೆ ಧನಪ್ರಾಪ್ತಿ ಯೋಗ: ಗುರುವಾರದ ರಾಶಿ ಭವಿಷ್ಯ 19 ಜೂನ್ 2025:
ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.
ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಹೆಚ್ಚಿಸಲಾಗಿದೆ. ಅಂತೆಯೇ ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ.
ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ