ಬೆಂಗಳೂರು: ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ನಿಧನರಾಗಿದ್ದಾರೆ.
ಚಿಕಿತ್ಸೆ ಫಲಕಾರಿ ಅಕ್ಷಯ್ ಕೊನೆಯುಸಿರೆಳೆದಿದ್ದು, ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ಆರೋಗ್ಯ ಗಂಭೀರವಾಗಿತ್ತು.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅಕ್ಷಯ್ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ತಲೆಗೆ ಶಸ್ತ್ರ ಸಹ ಮಾಡಲಾಗಿದ್ದು, ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎಂದು ವೈಧ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.
ಅಕ್ಷಯ್ ಮೂಲತಃ ಬನಶಂಕರಿಯ ಕತ್ರಿಗುಪ್ಪೆಯ ಶ್ರೀನಗರದ ನಿವಾಸಿ. ರಾಜಾಜಿನಗರದ ಖಾಸಗಿ ಕಂಪನಿವೊಂದರಲ್ಲಿ ಹೆಚ್.ಆರ್. ಕೆಲಸ ಮಾಡ್ತಿದ್ದ. ಕುಟುಂಬಸ್ಥರ ಆಕ್ರಂದನ ುಗಿಲು ಮುಟ್ಟಿದೆ.