ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ಗಳನ್ನು ತೆರವುಗೊಳಿಸಲು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ಆದೇಶಿಸಿದ್ದಾರೆ.
ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ರವರ ಆದೇಶದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಹಸಿರೀಕರಣಗೊಳಿಸುವ ಸಂದರ್ಭದಲ್ಲಿ ಹೆಚ್ಚಿನ ಮರಗಳ ಬುಡಗಳು ಕಾಂಕ್ರೀಟ್, ಟಾರ್ ಅಥವಾ ಇಂಟರ್ಲಾಕ್ ಪೇವರ್ಗಳಿಂದ ಮಾಡಿದ ಪಾದಚಾರಿ ಮಾರ್ಗಗಳಿಂದ ಮುಚ್ಚಲ್ಪಟ್ಟಿದೆ. ಇದರಿಂದಾಗಿ, ಮರಗಳ ಆರೋಗ್ಯ, ಬೆಳವಣಿಗೆ, ಬದುಕುಳಿಯುವಿಕೆಯ ಮೇಲೆ ಪರಿಣಾಮ ಬೀರಲಿದೆ. ಜೊತೆಗೆ ಅಸಮರ್ಪಕ ಗಾಳಿ ಮತ್ತು ನೀರಿನ ಒಳಹರಿವಿನಿಂದ ಅವುಗಳ ಬೇರುಗಳ ಪೋಷಣೆಯ ದುಷ್ಪರಿಣಾಮ ಬೀರಲಿದೆ. ಅದರಿಂದ, ರಸ್ತೆ ಬದಿಯಲ್ಲಿ ನೆಡಲಾಗಿರುವ ವೃಕ್ಷಗಳ ಬೇರು ಆಳಕ್ಕೆ ಇಳಿಯದೆ ಮಳೆ, ಗಾಳಿಯಲ್ಲಿ ಬಿದ್ದು, ಆಗುತ್ತಿರುವ ಪ್ರಾಣಹಾನಿ ಮತ್ತು ಆಸ್ತಿ ಹಾನಿ ತಪ್ಪಿಸಲು ಕ್ರಮ ಕೈಗೊಳ್ಳಬೇಕಿದೆ.
ಮರಗಳ ಬೇರಿನ ವ್ಯವಸ್ಥೆಗೆ ಹಾನಿಯಾಗದಂತೆ ತಡೆಯಲು, ಪಾದಚಾರಿ ಮಾರ್ಗಗಳು ಅಥವಾ ರಸ್ತೆಗಳನ್ನು ನಿರ್ಮಿಸುವಾಗ, ಬೇರುಗಳಿಗೆ ನೀರು ಸೋರುವಂತೆ ಮಾಡಲು ಮರಗಳ ಬುಡದ ಸುತ್ತಲೂ ಸಾಧ್ಯವಾದಲ್ಲೆಲ್ಲಾ 1 ಮೀಟರ್ ಪ್ರದೇಶವನ್ನು ಕಾಂಕ್ರೀಟ್ ತೆಗೆಯಲು ಬಿಡಬೇಕು. ಆ ಪ್ರದೇಶವನ್ನು ಮಣ್ಣಿನಿಂದ ಸಮತಟ್ಟು ಮಾಡಬೇಕು ಮತ್ತು ಸಾಧ್ಯವಾದಲ್ಲೆಲ್ಲಾ ಹುಲ್ಲನ್ನು ನೆಡಬಹುದು. ರಸ್ತೆಗಳು ಅಥವಾ ಮಾರ್ಗಗಳ ಮಧ್ಯದ ಅಂಚಿನಲ್ಲಿ ಕಾಂಕ್ರೀಟ್ ಹಾಕುವುದು ಹಾಕುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ.
ಮಾನ್ಯ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿರುವಂತೆ ಪಾಲಿಕೆ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗಗಳು ಅಥವಾ ರಸ್ತೆಗಳಲ್ಲಿ ಇರುವಂತಹ ಮರಗಳ ಸುತ್ತ ಕನಿಷ್ಠ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೂಡಲೇ ತೆರವುಗೊಳಿಸಬೇಕು. ಜೊತೆಗೆ ಕಿರಿದಾದ ರಸ್ತೆಗಳು ಮತ್ತು ಮಾರ್ಗಗಳಲ್ಲಿ, ಸಾಧ್ಯವಾದಷ್ಟು, ಮರಗಳ ಸುತ್ತಲೂ ಕನಿಷ್ಠ 1 ಚದರ ಮೀಟರ್ನಷ್ಟು ಡಾಂಬರು ಹಾಕದ ಅಥವಾ ಕಚ್ಚಾ ಪರಿಣಾಮಕಾರಿ ಪ್ರದೇಶವನ್ನು ಬಿಡಲು ಆದೇಶಿಸಿದೆ.