ಬೆಂಗಳೂರು: ನಟ ಕಂ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಕಿಚ್ಚ ಸುದೀಪ್ ಹೆಸರಲ್ಲಿ ನಂದಕಿಶೋರ್ ವಂಚಿಸಿದ್ದಾರೆ ಎನ್ನಲಾಗುತ್ತಿದೆ. ಕಿಚ್ಚನ ಆಪ್ತ ಬಳಗದಲ್ಲಿ ನಂದಕಿಶೋರ್ ಗುರುತಿಸಿಕೊಂಡಿದ್ದು, ಅವರ ಅಭಿಮಾನಿಗೆ ನಂದಕಿಶೋರ್ ದೋಖಾ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಿಚ್ಚನ ಅಭಿಮಾನಿಯಾಗಿರುವ ಶಬರೀಶ್ ಶೆಟ್ಟಿ ತಮಗಾಗಿರುವ ವಂಚನೆ ಬಗ್ಗೆ AIN ಕನ್ನಡಕ್ಕೆ ಮಾಹಿತಿ ಕೊಟ್ಟಿದ್ದಾರೆ.
2016ರಲ್ಲಿ ನನಗೆ ನಂದ ಕಿಶೋರ್ ಜಿಮ್ನಲ್ಲಿ ಪರಿಚವಾಗಿದ್ದರು. ನಾನು ನಂದ ಕಿಶೋರ್ ಅವ್ರಿಗೆ ಚಿನ್ನ ಅಡವಿಟ್ಟು 22 ಲಕ್ಷ ಕೊಟ್ಟಿದ್ದೀನಿ. 9 ವರ್ಷಗಳಿಂದ ನನಗೆ ನಂದ ಕಿಶೋರ್ ಹಣವನ್ನು ನೀಡಿಲ್ಲ. ಹಣ ಕೇಳಿದ್ರೆ ನಂದ ಕಿಶೋರ್ ನನಗೆ ಧಮ್ಕಿ ಹಾಕ್ತಾರೆ. ನಾನು ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರೇಳಿ ಯಾಮಾರಿಸ್ತಿದ್ರು. ಸಿನಿಮಾದಲ್ಲಿ ಅವಕಾಶ ಕೊಡ್ತಿನಿ ಅಂತ ಹೇಳಿ ನನಗೆ ಮೋಸ ಮಾಡಿದ್ದಾರೆ. ಇತ್ತ ನನಗೆ ನನ್ನ ಹಣವು ಕೊಟ್ಟಿಲ್ಲ, ಸಿನಿಮಾದಲ್ಲಿ ಅವಕಾಶವನ್ನು ಕೊಡಲಿಲ್ಲ. ನಾನು ಸಿಸಿಎಲ್ ನಲ್ಲಿ ಆಡವು ಕನಸ್ಸು ಕಟ್ಟಿಕೊಂಡಿದ್ದೆ. ಕೆಸಿಸಿ ಟೂರ್ನಿಯಲ್ಲಿ ನಾನು ಎರಡು ಸೀಸನ್ ಆಡಿದ್ದೇನೆ.
ಹಣ ಕೇಳಿದ್ರೆ ನಿನ್ನ ಕೆಸಿಸಿಯಿಂದ ಹೊರ ಹಾಕ್ತಿನಿ ಅಂತ ಬೆದರಿಕೆ ಹಾಕ್ತಿದ್ರು. ನಾನು ಸುದೀಪ್ ಸರ್ ಜೊತೆ ಕ್ರಿಕೆಟ್ ಆಡುವ ಆಸೆಯಿಂದ ಸುಮ್ಮನಾಗ್ತಿದ್ದೆ. ಈಗ ನನ್ನ ರಾಮಧೂತ ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದೆ. ಸಿನಿಮಾ ರಿಲೀಸ್ ಮಾಡಲು ನನ್ನ ಬಳಿ ಹಣ ಇಲ್ಲ. ನನ್ನ ಹಣ ವಾಪಸ್ ಕೊಡಿ ಅಂದ್ರೆ ಏನ್ ಮಾಡ್ಕೊತ್ಯ ಮಾಡ್ಕೋ ಅಂತಾರೆ. ನಮ್ಮಂತ ಪುಟ್ಟ ಕಲಾವಿದರು ಹೇಗೆ ಬದುಕೊದು ಗೊತ್ತಾಗ್ತಿಲ್ಲ. ನಾನು ಈ ವಿಚಾರವನ್ನು ಸುದೀಪ್ ಸರ್ ಗಮನಕ್ಕೆ ತರಲು ಪ್ರಯತ್ನ ಪಟ್ಟಾಗ ನನ್ನ ತಡೆದ್ರು. ನನ್ನ ಹಣ ನನಗೆ ಕೊಡದಿದ್ರೆ ನಂದ ಕಿಶೋರ್ ವಿರುದ್ದ ಕಾನೂನು ಮೊರೆ ಹೋಗ್ತಿನಿ ಶಿವಣ್ಣ ಸುದೀಪ್ ಸರ್ ಫಿಲ್ಮ್ ಚೇಂಬರ್ ಗೆ ದೂರು ಕೊಡ್ತಿನಿ ಎಂದು ಶಬರೀಶ್ ಶೆಟ್ಟಿ ತಮಗಾಗಿರುವ ವಂಚನೆ ಬಗ್ಗೆ ಹೇಳಿಕೊಂಡಿದ್ದಾರೆ.