ಬೆಳಗಾವಿ: ವಸತಿ ಯೋಜನೆಯಲ್ಲಿ ಲಂಚದ ಆರೋಪದ ಕುರಿತು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಮತ್ತು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಡುವಿನ ಆಡಿಯೋ ಸೋರಿಕೆಯಾಗಿರುವುದು ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ. ಇನ್ನು ಈ ವಿಚಾರವಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಶಾಸಕರ ಹೇಳಿಕೆಯನ್ನು ತನಿಖೆ ಮಾಡಿಸಬೇಕು, ಮೊದಲು ತನಿಖೆ ಆಗಬೇಕು, ಆಮೇಲೆ ವಿಚಾರ ಮಾಡೋಣ. ತನಿಖೆಯಿಂದ ಸತ್ಯಾಂಶ ಹೊರ ಬರುತ್ತೆ. ನಾನಾಗಿ ಯಾವುದೇ ತನಿಖೆಗೆ ಒತ್ತಾಯ ಮಾಡಲ್ಲ. ಇಲಾಖೆ ತಾನಾಗಿಯೇ ತನಿಖೆ ನಡೆಸಲಿ. ಅದು ಅವರ ಕರ್ತವ್ಯ ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ವಿಭಜನೆ ವಿಚಾರದ ಕುರಿತು ಮಾತನಾಡಿದ ಅವರು, ತಕ್ಷಣ ಆಗುತ್ತೆ ಅಂತಾ ಇಲ್ಲ. ಇದೇ ಸರ್ಕಾರದಲ್ಲಿ ಜಿಲ್ಲೆ ವಿಭಜನೆ ಆಗಬೇಕು ಅನ್ನೋದು ನನ್ನ ಆಸೆಯಿದೆ, ಸ್ವಲ್ಪ ವಿಳಂಬ ಆಗುತ್ತಿದೆ. ನಾನಾ ಕಾರಣಗಳಿವೆ. ಇದೆ ಸರ್ಕಾರದಲ್ಲಿ ಮಾಡಬೇಕು ಎಂದು ನಮ್ಮದು ಪ್ರಯತ್ನವಿದೆ ಎಂದರು.