ಬೆಂಗಳೂರು: ವಸತಿ ಯೋಜನೆಯಲ್ಲಿ ಲಂಚದ ಆರೋಪದ ಕುರಿತು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಮತ್ತು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಡುವಿನ ಆಡಿಯೋ ಸೋರಿಕೆಯಾಗಿರುವುದು ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!
ನಗರದಲ್ಲಿ ಮಾತನಾಡಿದ ಅವರು, ಬಿ.ಆರ್ ಪಾಟೀಲ್ ಏನ್ ಹೇಳಿದ್ದಾರೆ ಗೊತ್ತಿಲ್ಲ, ಅವರನ್ನೇ ಕೇಳಬೇಕು. ಅಂತಹ ಭ್ರಷ್ಟಾಚಾರ ಏನಾದ್ರು ಆಗಿದ್ರೆ ಅದರ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಏನಾದ್ರೂ ಮಾಹಿತಿಗಳು ಇದ್ದರೆ ಪಾಟೀಲ್ ಅವರು ಕೊಡಲಿ. ಸಂಬಂಧಪಟ್ಟ ಸಚಿವರ ಜತೆ ನಾನೇ ಮಾತಾಡ್ತೀನಿ ಎಂದರು.
ಭ್ರಷ್ಟಾಚಾರ ಸಹಿಸೋಕೆ ಸಾಧ್ಯವಿಲ್ಲ. ಭ್ರಷ್ಟಾಚಾರ ಇಲ್ಲವೇ ಇಲ್ಲ ಅಂತ ಹೇಳೋಕೆ ಆಗೊಲ್ಲ. ಕೇಂದ್ರ ಸರ್ಕಾರದಲ್ಲೂ ಭ್ರಷ್ಟಾಚಾರ ಇದೆ. ಇಡಿ, ಐಟಿಯಲ್ಲೂ ಭ್ರಷ್ಟಾಚಾರ ಇದೆ. ರೇಡ್ ಮಾಡಿ ಬಳಿಕ ಹಣ ಪಡೆದು ರೇಡ್ ಕೈ ಬಿಡೋ ವ್ಯವಸ್ಥೆಗಳೂ ಇವೆ. ಭ್ರಷ್ಟಾಚಾರ ಎಲ್ಲಾ ಕಡೆ ಇದೆ. ಅದನ್ನ ನಿಯಂತ್ರಣ ಮಾಡೋ ಕೆಲಸಗಳು ಆಗಬೇಕು ಎಂದರು.