Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಕ್ಕಳು ದೇವರ ಸಮಾನ, ಅವರಲ್ಲಿ ಜಾತಿ, ಮತ, ಪಂಥ ಭೇದವಿರುವುದಿಲ್ಲ: ಬಿ.ವೈ.ವಿಜಯೇಂದ್ರ

    By Author AINJune 21, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು :ಜಯನಗರದ ಶ್ರೀ ಚಂದ್ರಗುಪ್ತ ಮೌರ್ಯ(ಶಾಲಿನಿ ಆಟದ)ಮೈದಾನದಲ್ಲಿ ರಕ್ಷಾ ಫೌಂಡೇಷನ್ (ರಿ)ವತಿಯಿಂದ 13ನೇ ವರ್ಷದ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಉಚಿತವಾಗಿ 2ಲಕ್ಷ ನೋಟ್ ಪುಸ್ತಕಗಳ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಅನಾಥ ಆಶ್ರಮದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ.

    ಶಾಸಕರು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರರವರು, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ರವರು, ರಕ್ಷಾ ಫೌಂಡೇಷನ್ ಸಂಸ್ಥಾಪಕರು, ಶಾಸಕರಾದ ಸಿ.ಕೆ.ರಾಮಮೂರ್ತಿರವರು, ಶಾಸಕರಾದ ಉದಯ್ ಗರುಡಾಚಾರ್ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ನಾಗರತ್ನ ರಾಮಮೂರ್ತಿರವರು, ಬಿಗ್ ಬಾಸ್ ಖ್ಯಾತಿಯ ಪ್ರಥಮ್, ನಟ ವಸಿಷ್ಟ ಸಿಂಹರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ನೋಟ್ ಪುಸ್ತಕ, ಲ್ಯಾಪ್ ಟಾಪ್ ಗಳನ್ನು ವಿತರಿಸಿದರು.

    ಬಿ.ವೈ.ವಿಜಯೇಂದ್ರರವರು ಮಾತನಾಡಿ ರಕ್ಷಾ ಫೌಂಡೇಷನ್ ಸ್ಥಾಪಕರಾದ ಶಾಸಕರಾದ ರಾಮಮೂರ್ತಿರವರ ನೇತೃತ್ವದಲ್ಲಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಹ ಸಹಕಾರ ನೀಡುತ್ತಿದ್ದಾರೆ, 11ನೇ ವಿಶ್ವ ಯೋಗ ದಿನಾಚರಣೆ ಅಚರಿಸಲಾಗುತ್ತಿದೆ ಇಂದು.

    ಭಾರತದ ಯೋಗ ವಿಶ್ವಮಟ್ಟದಲ್ಲಿ ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ ಹೆಚ್ಚು ಪ್ರಚಲಿತಕ್ಕೆ ಬಂತು. ಮಕ್ಕಳು ದೇವರ ಸಮಾನ, ಅವರ ಮನಸ್ಸಿನಲ್ಲಿ ಯಾವ ಕೆಟ್ಟ ಚಿಂತನೆಯು ಇರುವುದಿಲ್ಲ, ಜಾತಿ ಮತ ಪಂಥ ಭೇದವಿರುವುದಿಲ್ಲ.

    ಸಾಧನೆ ಇಲ್ಲದೇ ಹೋದರೆ ಸಾವಿಗೆ ಅರ್ಥವಿಲ್ಲ, ಹುಟ್ಟಿದ ಮೇಲೆ ಸಾಧನೆ ಮಾಡಿ ನಿಲ್ಲಬೇಕು ಎಂದು ಹೇಳಿದರು. ಆರ್.ಅಶೋಕ್ ರವರು ಮಾತನಾಡಿ ಪ್ರತಿ ವರ್ಷ ಅಪರೂಪದ ಕಾರ್ಯಕ್ರಮವನ್ನು ರಕ್ಷಾ ಫೌಂಡೇಷನ್ ಮಾಡುತ್ತಿದೆ, ಶಿಕ್ಷಣಕ್ಕೆ ಸಹಕಾರ ನೀಡುತ್ತಿದ್ದಾರೆ.

    ಗುರುಗಳು ಪಾಠ ಮಾಡುತ್ತಾರೆ, ತಂದೆ, ತಾಯಿ ಹೇಳಿಕೊಡುತ್ತಾರೆ ಅದರೆ ನಾವೆ ಪರೀಕ್ಷೆ ಬರೆಯಬೇಕು ಯಾರು ನಿಮಗೆ ಸಹಕಾರ ನೀಡುವುದಿಲ್ಲ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದರೆ ಜೀವನದಲ್ಲಿ ಉತ್ತಮ ಅಂಕಗಳಿಸಿ, ಸಾಧನೆ ಮಾಡಬಹುದು ಎಂದು ಹೇಳಿದರು.

    ಶಾಸಕರಾದ ಸಿ.ಕೆ.ರಾಮಮೂರ್ತಿರವರು ಮಾತನಾಡಿ ವಿದ್ಯಾವಂತರಾದರೆ ಸಮಾಜದಲ್ಲಿ ಗೌರವ, ಮಾನ್ಯತೆ ಸಿಗುತ್ತದೆ, ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ವಿದ್ಯಾವಂತರಾಗಬೇಕು, ದೇಶ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಮುಖ್ಯ.ಶ್ರೀಮಂತ ಕುಟುಂಬದ ಮಕ್ಕಳಿಗೆ ಎಲ್ಲವು ಸಿಗುತ್ತದೆ ಅದರೆ ಬಡ ಮತ್ತು ಮಧ್ಯಮ ವರ್ಗದವರಿಗೆ ಆರ್ಥಿಕ ಮುಗ್ಗಟ್ಟಿನಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ.

    ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ಎಂದು ರಕ್ಷಾ ಫೌಂಡೇಷನ್ ಉಚಿತ ನೋಟ್ ಪುಸ್ತಕ ಮತ್ತು ಉನ್ನತ ವ್ಯಾಸಂಗದ ಅನುಕೂಲಕ್ಕೆ ಲ್ಯಾಪ್ ಟಾಪ್ , ವಿದ್ಯಾರ್ಥಿ ವೇತನ ನೀಡುತ್ತಾ ವಿದ್ಯಾವಂತ ಸಮಾಜ ನಿರ್ಮಾಣ ಮಾಡಬೇಕು ಎಂಬ ಉದ್ದೇಶ ನಮ್ಮದು ಎಂದು ಹೇಳಿದರು.ಬಿಟ್ಸ್ ಗುರು ತಂಡ ಸಂಗೀತ ಕಾರ್ಯಕ್ರಮ ಮತ್ತು ಪುಟ್ಟರಾಜುರವರ ಜಾದು ಪ್ರದರ್ಶನ ಏರ್ಪಡಿಸಲಾಗಿತ್ತು.

    ಜಯದೇವ ಆಸ್ಪತ್ರೆಗೆ 2ಲಕ್ಷ ರೂಪಾಯಿ ದೇಣಿಗೆಯನ್ನು ಜಯದೇವ ಆಸ್ಪತ್ರೆ ನಿರ್ದೇಶಕರಾದ ರವೀಂದ್ರನಾಥ್ ರವರಿಗೆ ನೀಡಲಾಯಿತು.ಮಾಜಿ ಪಾಲಿಕೆ ಸದಸ್ಯಕೆ.ಉಮೇಶ್ ಶೆಟ್ಟಿ, ಸೋಮಶೇಖರ್, ಗೋವಿಂದನಾಯ್ಡು,ದೀಪಿಕಾ ಮಂಜುನಾಥ್ ರೆಡ್ಡಿ, ಚನ್ನಗಿರಿಯಪ್ಪ, ಚಂದ್ರಶೇಖರ ರಾಜು, ಬಿಜೆಪಿ ಮುಖಂಡ ತಮ್ಮೇಶ್ ಗೌಡ, ಲಕ್ಷಿಕಾಂತ್, ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ನರೇಶ್ ರವರು ಭಾಗವಹಿಸಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ವಸತಿ ಯೋಜನೆ ಅವ್ಯವಹಾರದ ಬಗ್ಗೆ ಮಾತಾಡಿದ್ದು ಸತ್ಯ, ಸಿಎಂ ಕರೆದರೆ ಹೋಗಿ ಹೇಳುತ್ತೇನೆ: ಬಿಆರ್ ಪಾಟೀಲ್

    June 21, 2025

    ಉತ್ಸಾಹದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದ ಮೆಡಿಕವರ್ ಆಸ್ಪತ್ರೆ

    June 21, 2025

    2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ್ರೆ 7 ವರ್ಷಗಳ ಜೈಲು ಶಿಕ್ಷೆ! ದಂಡವೆಷ್ಟು ಗೊತ್ತಾ..?

    June 21, 2025

    ಅಂತಾರಾಷ್ಟ್ರೀಯ ಯೋಗ ದಿನ: ವಿಜಯೇಂದ್ರ, ಅಶ್ವಥ್ ನಾರಾಯಣ್ ಸೇರಿದಂತೆ ಹಲವರು ಭಾಗಿ

    June 21, 2025

    ಮನೆ ಹಂಚಿಕೆಗೆ ಲಂಚ ಪ್ರಕರಣ: ಆಡಿಯೋ ಲೀಕ್ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು..?

    June 21, 2025

    ಮಳೆಗಾಲದಲ್ಲಿ ಬಟ್ಟೆ ಬೇಗ ಒಣಗುತ್ತಿಲ್ವಾ..? ಹಾಗಾದ್ರೆ ಬೇಗನೆ ಒಣಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025

    ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ!

    June 21, 2025

    ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ:

    June 21, 2025

    ಮಡಿಕೇರಿಯ ಗೌಡ ಸಮಾಜದಲ್ಲಿ 11 ನೇ ಯೋಗ ದಿನಾಚರಣೆ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.