ವಿಜಯಪುರ:- ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ನಾಗರಹಳ್ಳಿ ರಸ್ತೆಯ ಜಮೀನಿನಲ್ಲಿ ಜರುಗಿದೆ.
ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ್ಯಾಲಿ ವೇಳೆ ದುರಂತ!
ಫಾರುಕ್ ಲಾಳಸಂಗಿ (26) ಕೊಲೆಯಾದ ಯುವಕ. ಅನೈತಿಕ ಸಂಬಂಧ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.