ಬೆಂಗಳೂರು:- ರಾಜ್ಯ ಬಿಜೆಪಿಗೆ ಮಿತ್ರಪಕ್ಷ ಜೆಡಿಎಸ್ ಬಿಗ್ ಶಾಕ್ ಕೊಟ್ಟಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಸ್ಥಾನಕ್ಕೇರಿದ್ರು. ಇದೀಗ ಕುಮಾರಸ್ವಾಮಿ ಮಿತ್ರ ಪಕ್ಷದಲ್ಲೇ ಆಪರೇಷನ್ ಶುರು ಮಾಡಿದ್ದಾರೆ ಎನ್ನಲಾಗ್ತಿದೆ. ಬಿಜೆಪಿ ಜೊತೆ ಮೈತ್ರಿ ಇದ್ದರೂ, ಆ ಪಕ್ಷದ ಮುಖಂಡರನ್ನೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ತಿದ್ದು, ಎಚ್ಡಿಕೆ ಹೊಸ ರಣತಂತ್ರ ರೂಪಿಸಿದ್ದಂತೆ ಕಾಣ್ತಿದೆ ಎನ್ನಲಾಗ್ತಿದೆ.
2023ರ ಚುನಾವಣೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಕೃಷ್ಣ ನಾಯಕ್ ಬಿಜೆಪಿಗೆ ಗುಡ್ ಬೈ ಹೇಳಿ ಇಂದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮೈಸೂರು ಭಾಗದಲ್ಲಿ ಚಿಗುರೊಡೆಯುತ್ತಿದ್ದ ಕಮಲವನ್ನು ಜೆಡಿಎಸ್ ಚಿವುಟಿ ಹಾಕಿದಂತಾಗಿದೆ.
2023ರ ಚುನಾವಣೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಕೃಷ್ಣ ನಾಯಕ್ ಅವರು ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಸೇರ್ಪಡೆಯಾದರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕೃಷ್ಣ ನಾಯಕ್ ಅವರು ತಮ್ಮ ಅಪಾರ ಬೆಂಬಲಿಗರ ಜೊತೆ ಜೆಡಿಎಸ್ ಸೇರ್ಪಡೆಯಾಗಿದ್ದು, ಪ್ರಮುಖ ನಾಯಕನನ್ನು ಕಳೆದುಕೊಂಡ ಬಿಜೆಪಿಗೆ ಮೈಸೂರು ಭಾಗದಲ್ಲಿ ಮತ್ತೆ ಹೊಡೆತಬಿದ್ದಂತಾಗಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಕೃಷ್ಣನಾಯಕ್ ಅವರು 2021ರಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಬಳಿಕ ಜೆಡಿಎಸ್ ತೊರೆದಯ ಬಿಜೆಪಿಗೆ ಸೇರ್ಪಡೆಯಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಚ್ ಡಿ ಕೋಟೆ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಕೃಷ್ಣ ನಾಯಕ್ ಅವರು ಬಿಜೆಪಿ ತೊರೆದು ವಾಪಸ್ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಹಳೇ ಮೈಸೂರು ಭಾಗದಲ್ಲೇ ಬಿಜೆಪಿ ಸೊರಗಿದೆ. ಹೀಗಾಗಿ ಇಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕೆನ್ನುವ ಪ್ಲ್ಯಾನ್ ಇತ್ತು. ಅಲ್ಲದೇ ಈ ಹಿಂದೆಯೇ ಹೈಕಮಾಂಡ್, ಹಳೇ ಮೈಸೂರು ಭಾಗದಲ್ಲಿ ಸಂಘಟನೆ ಹೆಚ್ಚು ಹೊತ್ತು ನೀಡುವಂತೆ ರಾಜ್ಯ ನಾಯಕರಿಗೆ ಸಂದೇಶ ನೀಡಿತ್ತು. ಇದರ ಮಧ್ಯ ಮಿತ್ರ ಪಕ್ಷವೇ ಆಪರೇಷನ್ ಮಾಡಿದ್ದು, ಬಿಜೆಪಿಗೆ ಬಿಗ್ ಶಾಕ್ ಆಗಿದೆ.