ಹಾಸನ:- ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ ಚೇತನ್ (38) ಊಟ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಇಹಲೋಕ ತ್ಯಜಿಸಿದ್ದಾರೆ.
, ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!
ನಿಶಾದ್ ಅಹ್ಮದ್ ಸಮಾಜ ಸೇವಕರಾಗಿದ್ದು, ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಅನಾಥ ಶವಗಳ ಅಂತ್ಯಕ್ರಿಯೆ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದರು. ಅಂಥಾ ಯವಕನೇ ಈಗ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಇನ್ನು ಚೇತನ್ ಎಂಬವರು ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮಗುವಿನ ಆಕ್ರಂದನ ಮುಗಿಲು ಮುಟ್ಟಿದೆ
ಹಾಸನ ಜಿಲ್ಲೆಯಲ್ಲಿ ಸಾಲು ಸಾಲು ಯುವಕರು ಹಾಗೂ ಮಧ್ಯ ವಯಸ್ಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕ ಹೆಚ್ಚಿಸಿದೆ