ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಈಗಾಗಲೇ 19ಕಂತಿನ ಹಣ ಬಿಡುಗಡೆ ಆಗಿದೆ. ಇದೀಗ ಈ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ ಮಾಡಬೇಕಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಲ್ಲಿ ನೇರ ಲಾಭ ವರ್ಗಾವಣೆ ಮೂಲಕ ವಾರ್ಷಿಕವಾಗಿ ಮೂರು ಕಂತುಗಳಲ್ಲಿ 6000 ಜಮಾ ಮಾಡಲಾಗುತ್ತದೆ. ಪಿಎಂ ಕಿಸಾನ್ ಯೋಜನೆಯ 20ನೇ ಕಂತು ಯಾವಾಗ ಬರುತ್ತದೆ ಎಂಬ ಒಂದೇ ಒಂದು ಪ್ರಶ್ನೆಗೆ ಇಲ್ಲಿದೆ ಉತ್ತರ.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಪಿಎಂ ಕಿಸಾನ್ ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತದೆ. ಈ ವರೆಗೆ ಈ ಯೋಜನೆಯಡಿ 19 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಕೊನೆಯ ಕಂತನ್ನು 2025ರ ಫೇಬ್ರವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು.
ಹೀಗಾಗಿ 20ನೇ ಕಂತನ್ನು 2025ರ ಜೂನ್ ಅಂತ್ಯದ ವೇಳೆಗೆ ಜಮಾ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ರೈತರಲ್ಲಿ ನಿರೀಕ್ಷೆಗಳು ಗರಿಗೆದರಿವೆ. ಆದರೆ, ಈ ಬಾರಿ ಕಂತು ಬಿಡುಗಡೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇ-ಕೈವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುದು ಕಡ್ಡಾಯವಾಗಿದೆ.
ಕೃಷಿ ಸಚಿವಾಲಯಕ್ಕೆ ದೂರು ನೀಡಿ..
ಕೃಷಿ ಸಚಿವಾಲಯದ ಪ್ರಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ತಲುಪಲಿದೆ.. ಒಂದು ವೇಳೆ ಹಣ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ತಲುಪದಿದ್ದರೆ ಅದನ್ನು ತಕ್ಷಣವೇ ಪರಿಹಾರ ಮಾಡಲಾಗುವುದು.
ನವ ರೈತರ ಖಾತೆಗೆ ಹಣ ಬಂದಿಲ್ಲ ಅದಕ್ಕೆ ಯಾವ ಸಮಸ್ಯೆ ಉಂಟಾಗಿದೆ ಎಂಬುದನ್ನು ತಿಳಿದು ಕೊಳ್ಳಲಾಗುವುದು.. ಒಂದು ವೇಳೆ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿರಿ ಫಲಾನುಭವಿ ರೈತರಿಗೆ ಹಣ ಜಮಾವಣೆ ಮಾಡಲಾಗುವುದು.
ನೀವು ಕೂಡ ಇಲ್ಲಿ ಸಂಪರ್ಕಿಸಬಹುದು
ಈ ಯೋಜನೆಯ ಸ್ಥಿತಿಯನ್ನು ನೀವೇ ಪರಿಶೀಲಿಸಿ ಮತ್ತು ಅರ್ಜಿ ಸಲ್ಲಿಸಬಹುದು. ನೀವು ಯೋಜನೆಯ ರೈತ ಕಲ್ಯಾಣ ವಿಭಾಗದಲ್ಲಿ ಸಂಪರ್ಕಿಸಬಹುದು. ದೆಹಲಿ(Delhi)ಯಲ್ಲಿರುವ ಅದರ ಫೋನ್ ಸಂಖ್ಯೆ 011-23382401 ಆಗಿದ್ದರೆ, ಅದರ ಇ-ಮೇಲ್ ಐಡಿ ([email protected]).