ತುಮಕೂರು:- ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ, ಕಲ್ಲುಪಾಳ್ಯದಲ್ಲಿ ಜರುಗಿದೆ. ವೀಣಾ(26) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಇನ್ನೂ ವೀಣಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದು ಕೊಲೆ ಎಂದು ಗಂಡನ ವಿರುದ್ಧ ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ದೂರಿನ ಅನ್ವಯ ಪತಿ ಪೊಲೀಸರಿಗೆ ಶರಣಾಗಿದ್ದಾನೆ.
ವೃತ್ತಿಯಲ್ಲಿ ವಕೀಲರಾಗಿರುವ ನಾಗರಾಜು, ವೀಣಾ ಜೊತೆ ಪ್ರೀತಿಸಿ ಮದುವೆ ಆಗಿದ್ದರು. ಹಲವು ದಿನಗಳ ಕಾಲ ಬೆಂಗಳೂರಿನಲ್ಲಿದ್ದರು. ಇತ್ತೀಚೆಗಷ್ಟೇ ಕಲ್ಲುಪಾಳ್ಯದಲ್ಲಿ ನೆಲೆಸಿದ್ದರು. ನಾಗರಾಜು ತಂದೆ ತಾಯಿ ನೋಡಿಕೊಳ್ಳುವ ವಿಚಾರವಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು..ಹಲವು ಬಾರಿ ಬುದ್ದಿ ಹೇಳಿದರೂ ಜಗಳ ಮಾಡಿಕೊಳ್ಳುತ್ತಿದ್ರು..
ಮೂರು ದಿನಗಳ ಹಿಂದೆ, ಜಗಳ ವಿಕೋಪಕ್ಕೆ ತಿರುಗಿ ವೀಣಾ ನೇಣಿಗೆ ಶರಣಾಗಿದ್ದಾರೆ. ಈ ವೇಳೆ ಕೂಡಲೇ ಪತಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಗಂಡನೇ ಕೊಲೆ ಮಾಡಿ ಬಳಿಕ ನೇಣು ಬಿಗಿದಿದ್ದಾನೆ ಎಂದು ವೀಣಾ ಪೋಷಕರು ದೂರು ನೀಡಿದ್ದಾರೆ.. ತನ್ನದೇನೂ ತಪ್ಪಿಲ್ಲ ತನಿಖೆಯನ್ನ ಮಾಡಿ ಎಂದು ತಾನೇ ಪೊಲೀಸ್ ಠಾಣೆಗೆ ಪತಿ ನಾಗರಾಜು ಶರಣಾಗಿದ್ದಾರೆ..
ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.