ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ತಿರುಪತಿ ಲಡ್ಡು ಪ್ರಕರಣ ಇದೀಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಅಂದಿನಿಂದ ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದ್ದು,
ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!
ಇದೀಗ ಬರೋಬ್ಬರಿ 10 ಲಕ್ಷ ಕೆ.ಜಿ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಟ್ಟಿದೆ. ಸೋಮವಾರ ಒಂದೇ ದಿನ ತಿರುಪತಿಗೆ 2.50 ಲಕ್ಷ ಕೆಜಿ ತುಪ್ಪವನ್ನು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕಹಾಮ) ಬಿಗಿ ಭದ್ರತೆಯೊಂದಿಗೆ ಕಳುಹಿಸಿಕೊಟ್ಟಿದೆ.
ಮೊದಲ ಭಾಗವಾಗಿ ಮಂಡ್ಯದ ಹಾಲು ಒಕ್ಕೂಟದಿಂದ ತುಪ್ಪ ಪೊರೈಕೆ ಮಾಡಿದ್ದು ಇನ್ನುಳಿದ ತುಪ್ಪವನ್ನು ಇತರೇ ಮಹಾ ಮಂಡಳಿಯಿಂದ ಕೆಎಂಎಫ್ ಕಳುಹಿಸಿ ಕೊಡಲಿದೆ. ತಿರುಪತಿ ಅಗತ್ಯಕ್ಕೆ ತಕ್ಕಂತೆ ನಂದಿನಿ ತುಪ್ಪ ಪೂರೈಕೆ ಮಾಡುವುದಾಗಿ ಕೆಎಂಎಫ್ ತಿಳಿಸಿದೆ.