ಹಾಸನ:- ಹಾಸನ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಜೋರಾಗಿದೆ. ನಗರದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ಸೇರಿ ಆಲೂರು ಮತ್ತು ಅರಕಲಗೂಡು ತಾಲ್ಲೂಕಿನ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?
ಸಕಲೇಶಪುರದ ಜೊತೆ ಆಲೂರು, ಅರಕಲಗೂಡು ತಾಲ್ಲೂಕಿನ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಕೂಡ ಸಕಲೇಶಪುರ ತಾಲ್ಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ರಜೆ ನೀಡಿತ್ತು. ಇದೀಗ ಇಂದು ಸಕಲೇಶಪುರ ತಾಲ್ಲೂಕಿನ ಜೊತೆಗೆ ಆಲೂರು ಅರಕಲಗೂಡು ತಾಲ್ಲುಕಿಗು ರಜೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.