ಬೆಂಗಳೂರು: ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್’ಗಿಲ್ಲ ಎಂದು ಮಂಡ್ಯ ಶಾಸಕ ರವಿ ಗಣಿಗ ಸಚಿವರ ಪರ ಬ್ಯಾಟಿಂಗ್ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮನೆ ಮಂಜೂರು ಮಾಡಲು ಹಣ ಪಡೆಯುವಷ್ಟು ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ. 2022ರಲ್ಲಿ ಆಯ್ಕೆಯಾದವರಿಗೆ ಈಗ ಮನೆ ನೀಡಲಾಗುತ್ತಿದೆ.
ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ
ಆಗ ಮನೆ ಮಂಜೂರಾಗಿದ್ದನ್ನು ಈಗ ಬದಲಾವಣೆ ಮಾಡಲು ಸಾಧ್ಯವಿಲ್ಲ. ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್ಗಿಲ್ಲ. ಜಮೀರ್ ಸಾಕಷ್ಟು ದಾನ-ಧರ್ಮ ಮಾಡಿದ್ದಾರೆ ಎಂದು ಸಚಿವರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಅನುದಾನಕ್ಕೆ ಡಿಕೆಶಿ ಕೃಪಾಶೀರ್ವಾದ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿಕೆಶಿ, ಸಿಎಂ ಅವರು ಅನುದಾನ ಕೊಟ್ಟಿದ್ದಾರೆ. ಒಂದು ಸಾವಿರ ಕೋಟಿ ರೂ. ಅನುದಾನ ಕ್ಷೇತ್ರಕ್ಕೆ ಸಿಕ್ಕಿದೆ. ದಿನ ಗುದ್ದಲಿ ಪೂಜೆ ಆಗುತ್ತಿದೆ. ಸಿಎಂ ಹಣಕಾಸು ಸಚಿವರು,
ಅವರು ಸಹಿ ಹಾಕದೇ ಡಿಸಿಎಂ ಸಹಿ ಹಾಕೋಕೆ ಆಗುತ್ತಾ? ಯಾರಿಗೆ ಯಾವ ಹೊಟ್ಟೆನೋವು ಇದೆಯೋ ಗೊತ್ತಿಲ್ಲ. ಅದನ್ನ ಈ ರೀತಿ ಕಕ್ಕುತ್ತಿದ್ದಾರೆ. ಪಕ್ಷದ ವೇದಿಕೆಯಲ್ಲಿ ಕಕ್ಕೋದು ಒಳ್ಳೆಯದು. ಒಂದಿಬ್ಬರು ಶಾಸಕರು ಮಾತಾಡ್ತಿದ್ದಾರೆ. ನಿಮ್ಮ ಏನೇ ಸಮಸ್ಯೆಯಿದ್ರೂ ಸಿಎಂ, ಡಿಸಿಎಂ ಜೊತೆ ಮಾತಾಡಿ. ಸಿಎಲ್ಪಿ ಸಭೆಯಿದೆ, ಅಲ್ಲಿ ಚರ್ಚೆ ಮಾಡಿ ಎಂದರು