ಮಾದಕ ದ್ರವ್ಯ ಪ್ರಕರಣದಲ್ಲಿ ಮತ್ತೊಬ್ಬ ನಟನನ್ನು ಬಂಧಿಸಲಾಗಿದೆ. ತೆಲುಗು ಹಾಗೂ ತಮಿಳು ಚಿತ್ರಗಳಲ್ಲಿ ನಟಿಸುವ ಪ್ರಸಿದ್ಧ ನಟನೊಬ್ಬ ಮಾದಕ ದ್ರವ್ಯಗಳೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಪ್ರಸ್ತುತ ಚೆನ್ನೈನಲ್ಲಿ ನೆಲೆಸಿರುವ ನಾಯಕನನ್ನು ಚೆನ್ನೈ ಮಾದಕ ದ್ರವ್ಯ ಗುಪ್ತಚರ ತಂಡ ಬಂಧಿಸಿದೆ. ನಟ ಶ್ರೀಕಾಂತ್ ಮನೆಯ ಮೇಲೆ ದಾಳಿ ಮಾಡಿದ್ದರು. ಶ್ರೀಕಾಂತ್ ರನ್ನು ವಿಚಾರಣೆ ಒಳಪಡಿಸಿದಾಗ ನಲವತ್ತಕ್ಕೂ ಹೆಚ್ಚು ಬಾರಿ ಡ್ರಗ್ಸ್ ಸೇವಿಸಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು.
Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ
ವಿಚಾರಣೆಯ ನಂತರ ಪೊಲೀಸರು ಶ್ರೀಕಾಂತ್ ರನ್ನು ಬಂಧಿಸಿದ್ದರು. ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಶ್ರೀಕಾಂತ್ ಕೂಡ ಹಲವು ನಟರ ಹೆಸರುಗಳನ್ನು ಬಾಯ್ಬಿಟ್ಟಿದ್ದ ಎಂದು ಹೇಳಲಾಗುತ್ತಿದೆ. ಶ್ರೀಕಾಂತ್ ಬಂಧನದ ನಂತರ ನಟ ಕೃಷ್ಣರನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಕೂಡ ಡ್ರಗ್ಸ್ ಖರೀದಿಸಿದ್ದರು ಎಂದು ಹೇಳಲಾಗುತ್ತಿದೆ.
ತಮಿಳು ಚಿತ್ರೋದ್ಯಮದಲ್ಲಿ ಡ್ರಗ್ಸ್ ಪ್ರಕರಣ ತೀವ್ರ ಸಂಚಲನವನ್ನೇ ಉಂಟು ಮಾಡಿದೆ. ಇನ್ನೂ ಕೆಲವು ನಟರು ಮತ್ತು ನಟಿಯರು ಹಾಗೂ ತಂತ್ರಜ್ಞರು ಈ ಡ್ರಗ್ಸ್ ಜಾಲದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಚೆನ್ನೈ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.