ಕೊಡಗು:- ಕೊಡಗು ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರಿದಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗಿನ ಅಂಗನವಾಡಿ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಇರುತ್ತದೆ. ಕಳೆದ ಕೆಲ ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಜೋರಾದ ಮಳೆ ಬೀಳುತ್ತಿದ್ದು, ಕೆಲವೆಡೆ ನೀರಿನ ಹರಿವು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಮನಗಂಡು ಈ ತೀರ್ಮಾನ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತದ ಸೂಚನೆಯಂತೆ, ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿರುವುದು, ರಸ್ತೆ ಸಂಚಾರ ವ್ಯತ್ಯಯಗೊಳ್ಳುವ ಸಂಭವ ಹಾಗೂ ಕೊಚ್ಚಿಕೊಳ್ಳುವ ಅಪಾಯಗಳ ಹಿನ್ನೆಲೆಯಲ್ಲಿ, ಮಕ್ಕಳು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಉಂಟಾಗದಂತೆ ರಜೆ ಘೋಷಿಸಲಾಗಿದೆ.