ಮಂಗಳೂರು:- ಮಂಗಳೂರು-ಕಾಸರಗೋಡು ಮದ್ಯೆ ಇರೋ ಮಂಜೇಶ್ವರದ ವರ್ಕಾಡಿಯಲ್ಲಿ ಪಾಪಿ ಮಗನೋರ್ವ ತನ್ನ ಹೆತ್ತ ತಾಯಿಯನ್ನೇ ಮಾರಕಾಸ್ರ್ರಗಳಿಂದ ಹೊಡೆದು ಬಳಿಕ ಕಾಡಿನೊಳಗೆ ಎಳೆದೊಯ್ದು ಬೆಂಕಿ ಹಚ್ಚಿ ಸುಟ್ಟಾಕ್ಕಿರುವ ಘಟನೆ ಜರುಗಿದೆ.
ತಾಯಿಯನ್ನು ಕೊಂದು ಎಸ್ಕೇಪ್ ಆಗಿದ್ದ ಪಾಪಿ ಮಗ ಮೆಲ್ವಿನ್ ಮೊಂತೇರೊ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಕೇರಳದ ಕಾಸರಗೋಡು ಜಿಲ್ಲೆಯ ವರ್ಕಾಡಿಯಲ್ಲಿ ಈತ ತನ್ನ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ಮನೆಯಲ್ಲಿ ವಾಸವಿದ್ದ. ತಂದೆ ಲೂಯಿಸ್ ಮೊಂತೇರೋ ತೀರಿಹೋಗಿದ್ದಾರೆ. ಇನ್ನು ಹಿಲ್ಡಾಗೆ ಮತ್ತೊಬ್ಬ ಅಲ್ವಿನ್ ಮೊಂತೇರೋ ಎಂಬ ಮಗ ಗಲ್ಫ್ ನಲ್ಲಿ ಕೆಲಸ ಮಾಡುತ್ತಿದ್ದಾನೆ. ಇನ್ನು ನಿನ್ನೆ (ಜೂನ್ 25) ಮದ್ಯರಾತ್ರಿ ಒಂದು ಗಂಟೆಗೆ ತಾಯಿ ಹಿಲ್ಡಾಳ ತಲೆಗೆ ಮಗ ಮೆಲ್ವಿನ್ ಮಾರಕಾಸ್ತ್ರದಿಂದ ಹೊಡೆದಿದ್ದಾನೆ. ಬಳಿಕ ಅಲ್ಲಿಂದ ಎಳೆದುಕೊಂಡು ಮನೆಯ ಹಿಂಭಾಗಕ್ಕೆ ಹೋಗಿ ಕಾಡಿನಂತಹ ಜಾಗದಲ್ಲಿ ಎಸೆದಿದ್ದಾನೆ. ಬಳಿಕ ಪೆಟ್ರೋಲ್ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದ.
ಇನ್ನು ತಾಯಿಯನ್ನು ಕೊಂದು ಅತ್ತೆಯನ್ನು ಕೊಲ್ಲಲು ಯತ್ನಿಸಿದ ಪಾಪಿ ಮೆಲ್ವಿನ್ ರಾತ್ರಿ ಇಡೀ ಮನೆಯಲ್ಲಿ ಕಾಲ ಕಳೆದಿದ್ದಾನೆ. ಬಳಿಕ ಬೆಳಗ್ಗೆ ವಿಚಾರ ಊರಿನವರಿಗೆ ತಿಳಿಯುತ್ತಲೆ ಒಬ್ಬೊಬ್ಬರೆ ಅಲ್ಲಿಗೆ ಬಂದಿದ್ದಾರೆ. ಅಲ್ಲಿಂದ ಮೆಲ್ವಿನ್ 2 ಕಿಲೋಮೀಟರ್ ಓಡಿ ಹೋಗಿ ಆಟೋ ಹಿಡಿದು ಹೊಸಂಗಡಿಗೆ ತಲುಪಿದ್ದಾನೆ. ಬಳಿಕ ಮಂಗಳೂರು ಬಸ್ ಹತ್ತಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ನಲ್ಲಿ ಇಳಿದಿದ್ದಾನೆ. ಅಲ್ಲಿಂದ ಕುಂದಾಪುರ ಬಸ್ ಹತ್ತಿ ಬೈಂದೂರು ತಲುಪಿದ್ದಾನೆ.
ಮೆಲ್ವಿನ್ ಅರ್ಥ್ ಮೂವರ್ಸ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಬೈಂದೂರು ಸುತ್ತಾಮುತ್ತಾ ಕಲ್ಲಿನಕೋರೆಯಲ್ಲಿ ಈ ಹಿಂದೆ ಕೆಲಸ ಮಾಡಿದ್ದ. ಆದ್ರಿಂದ ಆ ಜಾಗಕ್ಕೆ ಹೋಗಲು ಆತನ ಇಲ್ಲಿಗೆ ಬಂದಿದ್ದ. ಇನ್ನು ಒಂದು ಅಂಗಡಿಯಲ್ಲಿ ಕುಳಿತುಕೊಂಡಿದ್ದಾಗ ಬೈಂದೂರು ಪೊಲೀಸರ ಸಹಕಾರದಿಂದ ಕೇರಳ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿ ಮೆಲ್ವಿನ್ ಮೊಂತೇರೋ ಏನು ಬಾಯಿ ಬಿಡುತ್ತಿಲ್ಲ. ನನಗಿನ್ನು ಮದುವೆ ಆಗಿಲ್ಲ ಅಂತಷ್ಟೆ ಪೊಲೀಸರಿಗೆ ಹೇಳಿದ್ದಾನೆ ಎನ್ನುವುದು ತಿಳಿದು ಬಂದಿದೆ.