ಮಂಡ್ಯ;- ಅಕ್ರಮವಾಗಿ ಬೈಕ್ ನಲ್ಲಿ ಗಾಂಜಾ ಸಾಗಾಣೆ ಮಾಡ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯದ ಅಬಕಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಮ್ರಾಜ್ ಬೇಗ್,ಸೈಯದ್ ಹುಸೇನ್,ಜಬಿವುಲ್ಲಾ ಬಂಧಿತ ಆರೋಪಿಗಳು.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಬಳಿ ಆರೋಪಿಗಳು ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ಬೈಕ್ ನಲ್ಲಿ 3.5 ಲಕ್ಷ ರೂ ಮೌಲ್ಯದ ಗಾಂಜಾಂ ಸಾಗಾಣೆ ಮಾಡ್ತಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಅಬಕಾರಿ ಡಿ.ಸಿ ನಾಗಶಯನ ,ಇನ್ಸ್ಪೆಕ್ಟರ್ ಪ್ರಪುಲ್ಲಾ ಚಂದ್ರ ಸೇರಿ ಹಲವರು ಕಾರ್ಯಾಚರಣೆ ಯಲ್ಲಿ ಭಾಗಿಯಾಗಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನದ ವಶಕ್ಕೆ ಪಡೆಯಲಾಗಿದೆ.