Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    By AIN AuthorJune 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕೆಲವು ಮಹಾನ್ ವ್ಯಕ್ತಿಗಳನ್ನ ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಸಾಧನೆಗಳು ಎಂದಿಗೂ ಅಮರವಾಗಿರುತ್ತವೆ. ಇವರ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡರು ಸೇರುತ್ತಾರೆ.

    ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!

    ಮಾನವ ಸಂಪನ್ಮೂಲವೇ ಒಂದು ನಾಡಿನ ಅತ್ಯಮೂಲ್ಯ ಸಂಪನ್ಮೂಲ ಎಂದು ಅರಿತಿದ್ದ ಕೆಂಪೇಗೌಡರು, ನಾಡಿನ ಕುಶಲಕರ್ಮಿಗಳ ಕೌಶಲವನ್ನು ದೇಶದ ಒಳಿತಿಗೆ ಹಾಗೂ ಪ್ರಗತಿಗೆ ಬಳಸಿದಾಗ ದೇಶವು ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಮನಗಂಡಿದ್ದರು. ಹೀಗಾಗಿಯೇ, ತಮ್ಮ ಕಾಲಮಾನದ ಎಲ್ಲ ಕ್ಷೇತ್ರದ ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸಿ, ಆಶ್ರಯ ನೀಡಿದರು. ಅವರ ದೂರದೃಷ್ಟಿಯ ಫಲದಿಂದಾಗಿಯೇ ಬೆಂಗಳೂರಿಗೆ ಜಾಗತಿಕ ಮಟ್ಟದಲ್ಲಿ ‘ಸಿಲಿಕಾನ್ ಸಿಟಿ’ ಎಂಬ ಅಭಿದಾನ ದಕ್ಕಿತು.

    ಅದರಂತೆ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ರಾಜ್ಯಮಟ್ಟದ ಕಾರ್ಯಕ್ರಮವನ್ನು ಡಾ. ಬಾಬು ಜಗಜೀವನ್ ರಾಂ ಭವನದಲ್ಲಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಟ್ಟದ ಕಾರ್ಯಕ್ರಮವನ್ನು ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

    ಪ್ರಶಸ್ತಿ ಪ್ರಧಾನ ಸೇರಿದಂತೆ ಬೆಳಗ್ಗೆಯಿಂದ ಸಂಜೆವರೆಗೆ ವರೆಗೆ ನಾನಾ ಕಾರ್ಯಕ್ರಮಗಳು ಜರುಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುರುವಾರ ತಿಳಿಸಿದೆ. ಕಾರ್ಯಕ್ರಮಗಳ ಪಟ್ಟಿ, ಮೆರವಣಿಗೆ ಇತರ ವಿವರ ಇಲ್ಲಿದೆ.

    ಕೆಂಪೇಗೌಡರ ಜಯಂತಿಯ ದಿನದಂದು ಬೆಳಗ್ಗೆ 7.00 ಗಂಟೆಗೆ ನಗರದ ನಾಲ್ಕು ದಿಕ್ಕುಗಳಾದ ಲಾಲ್ ಬಾಗ್, ಮೇಕ್ರಿ ವೃತ್ತ, ಕೆಂಪಾಂಬುದಿ ಕೆರೆ ಹಾಗೂ ಹಲಸೂರು ಗಡಿ ಗೋಪುರಗಳಿಂದ ಹಾಗೂ 3 ಐತಿಹಾಸಿಕ ಸ್ಥಳಗಳಾದ ಮಾಗಡಿ ತಾಲ್ಲೂಕಿನ ಕೆಂಪಾಪುರ, ದೇವನಹಳ್ಳಿ ತಾಲ್ಲೂಕಿನ ಆವತಿ ಹಾಗೂ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಸೇರಿದಂತೆ ಒಟ್ಟು 7 ಸ್ಥಳಗಳಿಂದ ಸಚಿವರುಗಳ ನೇತೃತ್ವದಲ್ಲಿ ಪುರ ಜ್ಯೋತಿಗಳ ಮೆರವಣಿಗೆ ಹೊರಟು, ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ 7 ಪುರ ಜ್ಯೋತಿಗಳನ್ನು ಸ್ವೀಕರಿಸಲಾಗುತ್ತದೆ.

    ಪ್ರತಿಮೆಗಳಿಗೆ ಪುಷ್ಪ ನಮನ
    * ಬೆಳಗ್ಗೆ 9.00 ಗಂಟೆಗೆ ದೇವನಹಳ್ಳಿಯ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದ ಹತ್ತಿರ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಗೆ ಪುಷ್ಪ ನಮನ.

    * ಬೆಳಗ್ಗೆ 10.30ಕ್ಕೆ ಬಿಬಿಎಂಪಿ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮತ್ತು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಮಹಾತ್ಯಾಗಿ ಲಕ್ಷ್ಮಿದೇವಿ ಪ್ರತಿಮೆಗೆ ಪುಷ್ಪ ನಮನ.

    * ಬೆಳಗ್ಗೆ 11.11 ಗಂಟೆಗೆ ವಿಧಾನಸೌಧ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಪುಷ್ಪ ನಮನ.

    ಕೆಂಪೇಗೌಡ ಭವನ ನಿರ್ಮಾಣದ ಶಂಕುಸ್ಥಾಪನೆ
    ಬೆಂಗಳೂರು ನಗರ ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ ಬೆಳಗ್ಗೆ 12.15 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ.

    ಸುಮ್ಮನಹಳ್ಳಿ ಬಳಿಯಿರುವ ಡಾ. ಬಾಬು ಜಗಜೀವನ್ ರಾಂ ಭವನದಲ್ಲಿ ರಾಜ್ಯಮಟ್ಟದ ವೇದಿಕೆ ಕಾರ್ಯಕ್ರಮವು ಅಪರಾಹ್ನ 12.30ಕ್ಕೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಠಾಧೀಶರುಗಳು, ಮಾನ್ಯ ಸಚಿವರುಗಳು ಹಾಗೂ ಇನ್ನಿತರೆ ಗಣ್ಯರು ಕಾರ್ಯಕ್ರಮಕ್ಕೆ‌ ಚಾಲನೆ ನೀಡಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಮಟ್ಟದ ಅಂತರಾಷ್ಟ್ರೀಯ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

    ಬಿಬಿಎಂಪಿ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವು ಸಂಜೆ 4.30 ರಿಂದ 6.00 ಗಂಟೆಯವರೆಗೆ ನಡೆಯಲಿದ್ದು, ಮಾನ್ಯ ಉಪ ಮುಖ್ಯಮಂತ್ರಿಗಳು, ಸಚಿವರುಗಳು, ಶಾಸಕರುಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಸಂಜೆ 6.00 ಗಂಟೆಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಉತ್ತಮ ಅಧಿಕಾರಿ ನೌಕಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Friday Tips: ಶುಕ್ರವಾರ ಈ ಒಂದು ಕೆಲಸ ಮಾಡಿದ್ರೆ ಸಾಕು ಬೇಡ ಬೇಡ ಎಂದರೂ ಹಣ ಬರುತ್ತೆ.!

    June 27, 2025

    ಹಲಸಿನಹಣ್ಣು ಕದಿಯಲು ಬಂದು ಕಳ್ಳನ ಪೇಚಾಟ: ಮರದಲ್ಲಿ ನೇತಾಡಿದ ವ್ಯಕ್ತಿ.. ಅಷ್ಟಕ್ಕೂ ಆಗಿದ್ದೇನು?

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ನಿಮ್ಮ ಮನೆಯಲ್ಲಿಯೂ ಹಲ್ಲಿ, ಜಿರಳೆ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

    June 26, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಭರವಸೆ ಸಮಿತಿಯ ಬಿಹಾರ ನಿಯೋಗ: TA ಶರವಣ ನೇತೃತ್ವದಲ್ಲಿ ಸಭೆ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.