ಕಲಬುರಗಿ: ಗುರುಗಳನ್ನು, ಅಕ್ಷರ ಕಲಿಸುವ ಶಿಕ್ಷಕರನ್ನು ’ಗುರು ಬ್ರಹ್ಮ.. ಗುರು ವಿಷ್ಣು.. ಗುರು ದೇವೋ ಮಹೇಶ್ವರ: ಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರವೇ ನಮ: ಅಂತ ಕೈಮುಗೀತಾರೆ. ತಾಯಿ ಮಗುವಿಗೆ ಜೀವ ಕೊಟ್ಟರೆ, ಗುರು ಹೊಸ ಜೀವನ ಕೊಡುತ್ತಾನೆ. ಇಂತಹ ಮಹತ್ವದ ಸ್ಥಾನದಲ್ಲಿರುವ ಗುರು ಇನ್ನೊಬ್ಬರಿಗೆ ಮಾದರಿಯಾಗಿ ಇರಬೇಕು. ಆದರೆ ಆತನೇ ತಪ್ಪು ಮಾಡಿದ್ರೆ ಏನಾಗುತ್ತದೆ? ಹೀಗೆ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಈ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ.
UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!
ಹೌದು ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ಆಂಗ್ಲ ಶಿಕ್ಷಕನಾಗಿದ್ದ ಬಸವರಾಜ್ ದ್ಯಾಮ ಎಂಬಾತ ಶಾಲೆಯಲ್ಲಿ ಓದುವ ಹೆಣ್ಮಕ್ಕಳಿಗೆ ಕಿರುಕುಳ ಕೊಡುತ್ತಿದ್ದನಂತೆ. ಶಾಲೆ ವಿದ್ಯಾರ್ಥಿನಿಯರನ್ನ ಆಗಾಗ ಕಂಪ್ಯೂಟರ್ ಕ್ಲಾಸ್ ರೂಮ್ ಗಳಿಗೆ ಕರೆಸಿ ಅವರ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನುವ ಆರೋಪ ಇದೆ. ಶಿಕ್ಷಕ ಬಸವರಾಜ್ ವರ್ತನೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ಈ ಶಿಕ್ಷಕ ವಿದ್ಯಾರ್ಥಿಗಳ ಮೈ ಮುಟ್ಟಿ ಅಸಹ್ಯವಾಗಿ ಮಾತನಾಡುತ್ತಿದ್ದ ಎಂದು ಕೆಲವರು ಆರೋಪ ಮಾಡಿದ್ದಾರೆ. ಮಾರ್ಕ್ಸ್ ಕೊಡಲ್ಲ, ಹಾಲ್ ಟಿಕೆಟ್ ಕೊಡಲ್ಲ ಅಂತೆಲ್ಲಾ ಹೆಣ್ಮಕ್ಕಳಿಗೆ ಹೆದರಿಸಿದ್ದ ಎನ್ನಲಾಗ್ತಿದೆ. ಶಾಲೆ ಬಿಟ್ಟು ಹೋಗಿದ್ದ ವಿದ್ಯಾರ್ಥಿನಿಯರು ಹಾಲ್ ಟಿಕೆಟ್ ಪಡೆಯಲು ಶಾಲೆಗೆ ಬಂದಾಗಲೂ ಕಿರುಕುಳ ಕೊಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.