ಗದಗ:– ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿಕೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದಲ್ಲಿ ಯಾವುದೇ ಗೊಂದಲವಿಲ್ಲ, ರಾಜ್ಯದಲ್ಲಿ ಯಾವುದಾದರೂ ಗೊಂದಲರಹಿತ ಪಕ್ಷ ಇರೋದಾದರೆ ಅದು ಬಿಜೆಪಿ ಮಾತ್ರ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗುತ್ತಾರೆಯೇ ಎಂಬ ಪ್ರಶ್ನೆಯನ್ನು ಕೇಳಬೇಡಿ, ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆಗೆ ನೀಡುವುದು ಜಾಯಮಾನ ನನ್ನದಲ್ಲ, ಆದರೆ ಒಂದು ಮಾತು ಮಾತ್ರ ಸತ್ಯ, ಪಕ್ಷದ ರಾಷ್ಟ್ರಾಧ್ಯಕ್ಷರ ಮತ್ತ್ತು ರಾಜ್ಯಾಧ್ಯಕ್ಷರ ಆಯ್ಕೆ ಇಷ್ಟರಲ್ಲೇ ನಡೆಯಲಿದೆ ಎಂದು ಹೇಳಿದರು. ರಾಜ್ಯಾಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯೆಂದು ಯಾವತ್ತೂ ಹೇಳಿಲ್ಲ ಎಂದು ಬೊಮ್ಮಾಯಿ ಹೇಳಿದರು.