ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಅರಣ್ಯ ಇಲಾಖೆ ಶನಿವಾರ ಬಂಧಿಸಿದ್ದು ಹೆಚ್ಚಿನ ವಿಚಾರಣೆ ಕೈಗೊಂಡಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ ಕೋನಪ್ಪ ಹಾಗೂ ಹಸುವಿನ ಮೃತದೇಹಕ್ಕೆ ವಿಷಪ್ರಾಶನ ಮಾಡಿದ ಆರೋಪದ ಮೇಲೆ ಮಾದುರಾಜ್ ಹಾಗೂ ನಾಗರಾಜು ಪೂಜಾರಿಗೌಡ ಎಂಬ ದನಗಾಹಿಗಳನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಮಧುಮೇಹಿಗಳೇ ಗಮನಿಸಿ.. ಸಕ್ಕರೆ ಕಾಯಿಲೆಗೆ ಕೆಂಪು ದಂಟಿನ ಸೊಪ್ಪು ವರದಾನ..! ಸಿಕ್ಕರೆ ಬಿಡದೆ ತಿನ್ನಿ
ನಾಗರಾಜ್ ಮೃತ ಹಸುವಿಗೆ ಕ್ರಿಮಿನಾಶಕ ಹಾಕಿ ಬಂದಿದ್ದ. ಮರುದಿನ ವಿಷಪೂರಿತ ಹಸುವಿನ ಮಾಂಸ ತಿಂದು ಹುಲಿ ಮರಿಗಳು ಸತ್ತಿದ್ದವು. ಇತ್ತ ಹುಲಿಗಳು ಸತ್ತಿದ್ದನ್ನು ನೋಡಿ ಮಾದುರಾಜು ಸಂತಸ ಪಟ್ಟಿದ್ದ. ವಿಚಾರಣೆ ವೇಳೆ ಆರೋಪಿಗಳು ಒಂದೊಂದೆ ಸತ್ಯವನ್ನು ಬಾಯ್ಬಿಡುತ್ತಿದ್ದಾರೆ.
ಮೀಣ್ಯಂ ಸಮೀಪವೇ ಕೊಪ್ಪ ಗ್ರಾಮವಿದ್ದು ಜಾನುವಾರುಗಳಿಗೆ ಹುಲಿ ಉಪಟಳ ಕೊಡುತ್ತಿದೆ ಎಂಬ ಕೋಪಕ್ಕೆ ಹುಲಿ ಬೇಟೆಯಾಡಿದ್ದ ಹಸುವಿನ ದೇಹಕ್ಕೆ ಕ್ರಿಮಿನಾಶಕ ಸಿಂಪಡಿಸಿರುವುದಾಗಿ ಆರಂಭಿಕ ವಿಚಾರಣೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.