ಮೈಸೂರು: ಸಚಿವ ಕೆ ಎನ್ ರಾಜಣ್ಣ ಅವರ ಮಾತು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗಲಿ ಎಂಬ ಕೆಎನ್ ರಾಜಣ್ಣ ಹೇಳಿಕೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,
ಮನೆಯಲ್ಲಿ ಕಪ್ಪು ಹಲ್ಲಿ ಕಾಣಿಸಿಕೊಂಡ್ರೆ ಏನದರ ಸೂಚನೆ: ನಿಮಗೆ ಗೊತ್ತಿಲ್ಲದ ವಿಚಾರ ಇಲ್ಲಿದೆ!
ಕೆಲ ಗುಂಪುಗಳು ಮುಖ್ಯಮಂತ್ರಿ ಆಗಬೇಕೆಂದು ಆಕಾಂಕ್ಷೆ ಹೊಂದಿವೆ. ಆದರೆ, ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಮತ್ತು ಶಾಸಕರ ಬೆಂಬಲವಿದೆ. ಯಾವುದೇ ಬದಲಾವಣೆಯ ಸೂಚನೆ ಹೈಕಮಾಂಡ್ನಿಂದ ಬಂದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ವಿಪಕ್ಷಗಳ ಮಾತಿಗೆ ಬೆಲೆ ಕೊಡಬೇಕಿಲ್ಲ. ಲೋಕಸಭೆ ಚುನಾವಣೆ ಬಳಿಕ, ಮುಡಾ ಕೇಸ್ನಲ್ಲಿ ಸಿಎಂ ಬದಲಾವಣೆಯಾಗುತ್ತದೆ ಎಂದು ಆರ್. ಅಶೋಕ್ ಹೇಳಿದ್ದರು. ಆದರೆ, ಇವೆಲ್ಲವೂ ಊಹಾಪೋಹಗಳು ಎಂದು ಹೇಳಿದ್ದಾರೆ.