Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    By Author AINJune 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಲಬುರಗಿಯ ಖಡಕ್ ರೊಟ್ಟಿ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೊಟ್ಟಿ ಮತ್ತು ರೊಟ್ಟಿ ಮಾಡುವ ಮಹಿಳೆಯರನ್ನು ಶ್ಲಾಘಿಸಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ  ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ. ರೊಟ್ಟಿಗಳಿಗೆ ಆನ್ಲೈನ್ ಮಾರುಕಟ್ಟೆ ಸೃಷ್ಟಿಸಿ,

    ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?

    ಅದಕ್ಕೊಂದು ಬ್ರ್ಯಾಂಡ್ ರೂಪಿಸಿ, ದೊಡ್ಡ ಮಟ್ಟದ ಗ್ರಾಹಕ ವರ್ಗವನ್ನು ಸೃಷ್ಟಿಸಿದ ಪರಿಣಾಮ “ಕಲಬುರಗಿ ರೊಟ್ಟಿ”ಗಳು ಇಂದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಶಕ್ತಿ ಒದಗಿಸಿದೆ. ರೊಟ್ಟಿಗಳ ಘಮ ಪ್ರಧಾನಿಯವರಿಗೂ ತಲುಪಿದೆ! ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಂತಸ ಸೂಚಿಸಿದ್ದಾರೆ.

    ‘ಎಕ್ಸ್’ ನಲ್ಲಿ ಈ ಬಗ್ಗೆ ಬರೆದಿರುವ ಸಚಿವರು ನಮ್ಮ ‘ಕಾಮ್ ಕಿ ಬಾತ್’ನ ಯಶಸ್ಸನ್ನು ಪ್ರಧಾನಿಯವರು ‘ಮನ್ ಕಿ ಬಾತ್’ ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದಿದ್ದಾರಲ್ಲದೆ, ಕಲಬುರಗಿ ರೊಟ್ಟಿಯ ಯಶಸ್ಸಿನ ಕಥೆಯ ಹಿಂದೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿದ್ದಾರೆ.

    ಬ್ರ್ಯಾಂಡಿಂಗ್ ಗಾಗಿ ರಾಜ್ಯ ಸರ್ಕಾರ ಸೀಡ್ ಫಂಡ್ ಒದಗಿಸಿದೆ – ಸ್ವಸಹಾಯ ಸಂಘಗಳು ಹಾಗೂ ಇತರ ಉತ್ಸಾಹಿ ಮಹಿಳೆಯರಿಗೆ ಸಬ್ಸಿಡಿಯಲ್ಲಿ ಸುಮಾರು 150 ರೊಟ್ಟಿ ಯಂತ್ರಗಳನ್ನು ಒದಗಿಸಲಾಗಿದೆ – ಸಿ.ಎಸ್.ಆರ್ ನಿಧಿಯ ಮೂಲಕ ₹6.5 ಲಕ್ಷ ಒದಗಿಸಲಾಗಿದೆ.

    ಪ್ಯಾಕಿಂಗ್, ಲೇಬಲಿಂಗ್ ಮತ್ತು ಬ್ರ್ಯಾಂಡಿಂಗ್ ನಲ್ಲಿ ನೆರವು ನೀಡಲಾಗುತ್ತಿದೆ – ಹೊರ ರಾಜ್ಯಗಳಲ್ಲೂ ಮಾರುಕಟ್ಟೆ ವಿಸ್ತರಿಸಲಾಗುತ್ತಿದೆ – ವಿದೇಶಗಳಿಗೆ ರಫ್ತ್ತು ಮಾಡುವ ಸಾಧ್ಯತೆಗಳ ಬಗ್ಗೆ ಪ್ರಯತ್ನ ಮಾಡಲಾಗುತ್ತಿದೆ .

    ಸ್ವಿಗ್ಗಿ, ಜೋಮೊಟೊ, ಆಮೇಜಾನ್ ಸೇರಿದಂತೆ ಹಲವು ಪ್ರಸಿದ್ಧ ವೇದಿಕೆಗಳಲ್ಲೂ ಮಾರುಕಟ್ಟೆ ಸೃಷ್ಟಿಸಿಲಾಗಿದೆ ಇದು ಕಾಂಗ್ರೆಸ್ ಸರ್ಕಾರದ “ಕಾಮ್ ಕಿ ಬಾತ್”! “ರಿಪಬ್ಲಿಕ್ ಆಫ್ ಕಲಬುರಗಿ“ ಎನ್ನುತ್ತಿದ್ದ ಬಿಜೆಪಿ ನಾಯಕರಿಗೆ ಸ್ವತಃ ಪ್ರಧಾನಿಗಳೇ ”ಸಕ್ಸಸ್ ಸ್ಟೋರಿಸ್ ಆಫ್ ಕಲಬುರಗಿ” ಎಂಬ ಉತ್ತರ ನೀಡಿದ್ದಾರೆ ಎಂದು ಸಚಿವರು ತಮ್ಮ ಟ್ವೀಟ್ ನಲ್ಲಿ  ಹೇಳಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    Heart Attack: ಹೃದಯಾಘಾತಕ್ಕೆ ಅಸಲಿ ಕಾರಣ..? ಮೊಬೈಲ್, ಜಂಕ್’ಫುಡ್ ಹೃದಯದ ವಿಲನ್..!

    June 30, 2025

    Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ!

    June 30, 2025

    ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ..? ಇಲ್ಲಿದೆ ನೋಡಿ ಮಾಹಿತಿ

    June 30, 2025

    Heart Attack: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ! ಸೈನಿಕ ಸಾವು

    June 30, 2025

    ಹಾಸನದಲ್ಲಿ ಸಾವಿನ ಸೂತಕದ ಛಾಯೆ: ಹಠಾತ್ ಹೃದಯಾಘಾತಕ್ಕೆ ಮಹಿಳೆ ಸಾವು..!

    June 30, 2025

    ಬೆಂಗಳೂರಲ್ಲಿ ಮತ್ತೊಂದು ಚೀಟಿ ಪಂಗನಾಮ: ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿದ್ದ ವಂಚಕ ಅರೆಸ್ಟ್!

    June 30, 2025

    ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ?

    June 30, 2025

    ಬೆಂಗಳೂರಿಗೆ ಇಂದು ‘ಕೈ’ ಉಸ್ತುವಾರಿ ಸುರ್ಜೇವಾಲ ಎಂಟ್ರಿ: ಅಸಮಾಧಾನಿತ ಶಾಸಕರಿಗೆ ಬುಲಾವ್!

    June 30, 2025

    ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

    June 30, 2025

    ವಾಹನ ಸವಾರರ ಗಮನಕ್ಕೆ: ಜುಲೈ 2ರ ವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!

    June 30, 2025

    ಜುಲೈ 3ರಿಂದ ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ಅಬ್ಬರ ಯೆಲ್ಲೋ ಅಲರ್ಟ್!

    June 30, 2025

    ಕೋಲಾರ – ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.