ಮಂಡ್ಯ: ಕೆಆರ್ಎಸ್ ಜಲಾಶಯವು ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿಯಾಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ಈ ಐತಿಹಾಸಿಕ ಕ್ಷಣವನ್ನು ಗುರುತಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು,
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದ್ದಾರೆ. ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆದಿದ್ದು, ಸಿದ್ದರಾಮಯ್ಯಗೆ ನಾಲ್ಕನೇ ಬಾರಿಗೆ ಬಾಗಿನ ಅರ್ಪಿಸುವ ಸೌಭಾಗ್ಯ ದೊರಕಿದೆ. ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆಶಿ, ಸಚಿವರು, ಶಾಸಕರ ಸಾಥ್ ನೀಡಿದ್ದಾರೆ.
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸುತ್ತಿರುವ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಆಗಲಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ನಲ್ಲಿ ಯಾರು ಬಾಗಿನ ಸಲ್ಲಿಸಿರಲಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ನೂತನ ದಾಖಲೆ ಬರೆದಿದ್ದಾರೆ.