ಚಾಮರಾಜನಗರ:- ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿದೆ. ಕೋತಿಗಳನ್ನು ವಿಷವಿಕ್ಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳಿಗೆ ಬೇರೆಡೆ ವಿಷ ಹಾಕಿ ಕೊಂದು ನಂತರ ಇಲ್ಲಿ ತಂದು ಹಾಕಿರುವ ಅನುಮಾನವೂ ವ್ಯಕ್ತವಾಗಿದೆ.
ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಕೋತಿಗಳು ಸಾವನ್ನಪ್ಪಿದ್ದು, ಆತಂಕ ಮೂಡಿಸಿದೆ.