ಬೆಂಗಳೂರು ಗ್ರಾಮಾಂತರ: ನಮ್ಮ ಪ್ರಾಣ ನಮ್ಮ ಕೈಯಲ್ಲಿರುವುದಿಲ್ಲ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಹೃದಯಘಾತ, ಅಪಘಾತ ಹೀಗೆ ಅನೇಕ ಕಾರಣಗಳಿಂದ ಮನುಷ್ಯನ ಪ್ರಾಣ ಯಾವ ರೀತಿಯಲ್ಲಿಯಾದ್ರೂ ನಮ್ಮ ಕೈ ಮೀರಿ ಹೋಗಬಹುದು ಎನ್ನುವುದಕ್ಕೆ ಇಲ್ಲೊಂದು ಉದಾಹರಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಖಾಸಗಿ ಆಸ್ವತ್ರೆಯಲ್ಲಿ ನಡೆದಿದೆ.
Vastu Tips For Broom: ಮನೆಯ ಈ ದಿಕ್ಕಲ್ಲಿ ಪೊರಕೆ ಇಟ್ರೆ ಸಂಪತ್ತು..! ಹೀಗೆ ಮಾಡಿದ್ರೆ ಬಡತನ ಕಾಡುತ್ತೆ
ಹೌದು ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಯ ಮೆದುಳು ಕೆಲವೆ ನಿಮಿಷಗಳಲ್ಲಿ ನಿಷ್ಕ್ರಿಯಗೊಂಡ ಘಟನೆ ನಡೆದಿದೆ. ಹೊಸಕೋಟೆ ನಗರದ ಖಾಸಗಿ ಆಸ್ವತ್ರೆಗೆ ಬಂದಿದ್ದ ವ್ಯಕ್ತಿಯ ಮೆದಳು ಆಸ್ವತ್ರೆ ಬೆಡ್ ಮೇಲೆಯೆ ಕಾರ್ಡಿಯಾಕ್ ಅರೆಸ್ಟ್ ನಿಂದ ನಿಷ್ಕ್ರಿಯಗೊಂಡಿದೆ. ಹೊಸಕೋಟೆಯ ಕೋನಪ್ಪ ( 52 ) ಬ್ರೈನ್ ಡೆಡ್ ಆದ ವ್ಯಕ್ತಿಯಾಗಿದ್ದು, ಬೆಳಗ್ಗೆಯಿಂದ ಕೂಡ ಲವಲವಿಕೆಯಿಂದಲ್ಲೇ ಇದ್ದ ಕೋನಪ್ಪ, ಏಕಾಏಕಿ ಎದೆ ನೋವು ಅಂತ ನಡೆದುಕೊಂಡು ಆಸ್ಪತ್ರೆಗೆ ಬಂದಿದ್ದಾರೆ.
ಈ ವೇಳೆ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ ಕಾರ್ಡಿಯಾಕ್ ಅರೆಸ್ಟ್ನಿಂದ ಕುಸಿದು ಬಿದಿದ್ದಾರೆ. ತಕ್ಷಣ ಮತ್ತೊಂದು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲು ಮುಂದಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಮೆದುಳು ನಿಷ್ಕ್ರಿಯಗೊಂಡಿದೆ. ವ್ಯಕ್ತಿ ಆಸ್ವತ್ರೆಗೆ ನಡೆದುಕೊಂಡು ಬರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇತ್ತೀಚೆಗೆ ಕಾರ್ಡಿಯಾಕ್ ಅರೆಸ್ಟ್ನಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಈ ಬಗ್ಗೆ ವೈದ್ಯರು ಹೇಳಿದ್ದಾರೆ.